ಬೆಳಂದೂರು ನೂರುಲ್ ಹುದಾ ಮದರಸ ವಿದ್ಯಾರ್ಥಿಗಳಿಗೆ ATC ಅಬ್ದುಲ್ ಕರೀಂ ಹಾಜಿ ಕಾಣಿಯೂರು ಹಾಗೂ ಮಾಮು ಬೆಳಂದೂರು ರವರು ಸೇರಿ ಮದರಸ ವಿದ್ಯಾರ್ಥಿಗಳಿಗೆ 9000 ಸಾವಿರ ರೂಪಾಯಿ ಖರ್ಚಿನಿಂದ ಉಚಿತ ಪಾಠ ಪುಸ್ತಕ ವಿತರಣೆ ಕಾರ್ಯಕ್ರಮ ದಿನಾಂಕ 23/06/2021 ಬುಧವಾರ ನೂರುಲ್ ಹುದಾ ಮದರಸ ಹಾಳಿನಲ್ಲಿ ನಡೆಯಿತು.
ತಖ್ವಾ ಮಸೀದಿ ಇಮಾಮ್ ಅಬ್ದುಲ್ ಹಮೀದ್ ಸಖಾಫಿಯವರು ಸ್ವಾಗತ ಮಾಡಿದ ಕಾರ್ಯಕ್ರಮದ ಉದ್ಘಾಟನೆಯನ್ನು ಯುಸುಫ್ ಸಖಾಫಿ ಬೆಳಂದೂರು ನೆರವೆರಿಸದರು.
ಅಬ್ದುಲ್ ಕರೀಂ ಹಾಜಿಯವರು ಉಚಿತ ಪಾಠ ಪುಸ್ತಕ ವಿತರಣೆಗೆ ಚಾಲನೆ ನೀಡಿದರು. ತಖ್ವಾ ಮಸೀದಿ ಆಡಳಿತ ಮಂಡಳಿ ನೇತಾರರಾದ ಮಾಮು ಬೆಳಂದೂರು,ಯುವ ಉದ್ಯಮಿ. ಹಾಗೂ ತಖ್ವಾ ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಬೆಳಂದೂರು,ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ನಡುಗುಡ್ಡೆ,ಉಸ್ಮಾನ್ ಸುರುಳಿ ಮಜಲು,ಮುಹಮ್ಮದ್ ಇಟ್ಟಿಯಡ್ಕ,ಅಬ್ಬಾಸ್ ಕಲ್ಪಡ,ಮುಂತಾದ ಹಲವು ನಾಯಕರು ವಿದ್ಯಾರ್ಥಿಗಳಿಗೆ ಪಾಠ ಪುಸ್ತಕ ವಿತರಣೆ ಮಾಡಿದರು.
ಅಬ್ದುಲ್ ಕರೀಂ ಹಾಜಿ ಹಾಗೂ ಮಾಮು ಬೆಳಂದೂರು ರವರ ಮರಣ ಹೊಂದಿದ ತಾಯಿಯ ಹೆಸರಿನಲ್ಲಿ ದಾನವಾಗಿ ನೀಡಿದ ಮದರಸ ವಿದ್ಯಾರ್ಥಿಗಳ ಉಚಿತ ಪಾಠ ಪುಸ್ತಕ ವಿತರಣೆಯ ನಂತರ ಅವರ ಹೆಸರಿನಲ್ಲಿ ತಹ್ಲೀಲ್ ಹಾಗೂ ದುಆ ಮಜ್ಲಿಸಿಗೆ ಯುಸುಫ್ ಸಖಾಫಿ ನೇತೃತ್ವ ನೀಡಿದರು.
ಕಳೆದ ನಾಲ್ಕು ವರ್ಷಗಳ ಹಿಂದೆ ಊರಿನವರ ಸಹಾಯ ಸಹಕಾರದಿಂದ ನಿರ್ಮಾಣವಾದ ನೂರುಲ್ ಹುದಾ ಮದರಸ 7 ವಿದ್ಯಾರ್ಥಿಗಳಿಂದ ಆರಂಭಗೊಂಡ ಮದರಸ ಇದೀಗ ಸುಮಾರು 36 ವಿದ್ಯಾರ್ಥಿಗಳನ್ನು ಒಳಗೊಂಡು ಉತ್ತಮವಾದ ರೀತಿಯಲ್ಲಿ ಕಾರ್ಯಾಚರಿಸುತ್ತಿದೆ.
ವರದಿ:
ಅಬ್ದುಲ್ ಲತೀಫ್ ಮಿಸ್ಬಾಹಿ
ಬೆಳಂದೂರು
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)