ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಮತ್ತು ಸಿಟಿ ಬಸ್ ಸಂಚಾರ ಜುಲೈ 1ರಿಂದ ಸೀಮಿತ ಸಂಖ್ಯೆಯಲ್ಲಿ ಆರಂಭಗೊಳ್ಳುವ ಸಾಧ್ಯತೆ ಇದೆ. ಗುರುವಾರ ಮೂಡುಬಿದಿರೆಯಲ್ಲಿ ನಡೆದ ಬಸ್ ಮಾಲಕರ ಸಂಘದ ಸಭೆಯಲ್ಲಿ ಇದಕ್ಕೆ ಬಹುತೇಕ ಮಾಲಕರು ಒಪ್ಪಿಗೆ ಸೂಚಿಸಿದ್ದಾರೆ.
ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಅವರು ಮಾತನಾಡಿ, ಜು. 1ರಿಂದ ಖಾಸಗಿ ಬಸ್ಗಳು ಸೇರಿದಂತೆ ಮಂಗಳೂರು ನಗರದಲ್ಲಿ ಸಿಟಿ ಬಸ್ಗಳು ಸೀಮಿತ ಸಂಖ್ಯೆಯಲ್ಲಿ ಕಾರ್ಯಾಚರಣೆ ಆರಂಭವಾಗುತ್ತದೆ. ತೆರಿಗೆ ವಿನಾಯಿತಿ ಸಹಿತ ಕೆಲವೊಂದು ಬೇಡಿಕೆಗಳನ್ನು ಈಗಾಗಲೇ ರಾಜ್ಯ ಸರಕಾರಕ್ಕೆ ಸಲ್ಲಿಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರಿಕೆಗೆ ಮತ್ತೂಮ್ಮೆ ಮನವಿ ಮಾಡುತ್ತೇವೆ ಎಂದಿದ್ದಾರೆ.
ತಿಂಗಳಲ್ಲಿ ಕೇವಲ 7 ದಿನ ಬಸ್ ಓಡಿಸಿದರೆ, 1 ತಿಂಗಳ ತೆರಿಗೆ ಕಟ್ಟಬೇಕು. ಇದು ಕಷ್ಟ ಸಾಧ್ಯ. ಈಗಿನ ಡೀಸೆಲ್ ಬೆಲೆಯಲ್ಲಿ ಶೇ 50 ರಷ್ಟು ಪ್ರಯಾಣಿಕರನ್ನು ಕರೆದೊಯ್ಯುವುದು ನಷ್ಟ ಉಂಟಾಗಲಿದೆ. ಅಲ್ಲದೇ ನಗರದಾದ್ಯಂತ ಕಾಮಗಾರಿಗಾಗಿ ರಸ್ತೆ ಅಗೆದು ಹಾಕಲಾಗಿದೆ. 2 ತಿಂಗಳಿನಿಂದ ನಿಂತಿದ್ದ ಬಸ್ಗಳನ್ನು ಗ್ಯಾರೇಜ್ಗೆ ತೆಗೆದುಕೊಂಡು ಹೋಗಿ ದುರಸ್ತಿ ಮಾಡಿಸಬೇಕಿದೆ ಎಂದು ಬಸ್ ಮಾಲೀಕರು ತಿಳಿಸಿದ್ದಾರೆ. ಆದಾಗ್ಯೂ ಪರಿಸ್ಥಿತಿಯನ್ನು ಗಮನಿಸಿ ಜುಲೈ 1 ರಿಂದ ಸಿಟಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸರಕಾರದ ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಲು ಸಾಧ್ಯವಿಲ್ಲ. ಬಸ್ಸಲ್ಲಿರುವ ಸೀಟಿನ ಅರ್ಧದಷ್ಟು ಪ್ರಯಾಣಿಕರನ್ನು ಕರೆದುಕೊಂಡು ಹೋದರೆ ನಮಗೆ ಯಾವುದೇ ಆದಾಯ ಲಭಿಸದು. ಬಸ್ ಸಾರಿಗೆ ಉದ್ಯಮದ ಭವಿಷ್ಯದ ಹಿತದೃಷ್ಟಿಯಿಂದ ಜುಲೈ 1ರಿಂದ ಬಸ್ ಸಂಚಾರ ಆರಂಭಿಸಲು ಮುಂದಾಗಿದ್ದೇವೆ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಲಾಕ್ ಡೌನ್ ನಿರ್ಬಂಧದಲ್ಲಿ ಸಡಿಲಿಕೆ ಮಾಡಲಾಗಿದ್ದು, ಶೇಕಡ 50 ರಷ್ಟು ಪ್ರಯಾಣಿಕರು ಬಸ್ ಅಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಯಾವುದೇ ಖಾಸಗಿ ಬಸ್ ರಸ್ತೆಗಿಳಿದಿಲ್ಲ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ