ಬೆಂಗಳೂರು,ಜೂ.25: ಮಾದಕ ವಿರುದ್ಧ ದಿನದ ಅಂಗವಾಗಿ ವಿದ್ಯಾರ್ಥಿ-ಯುವ ಸಮೂಹದ ಭವಿಷ್ಯಕ್ಕೆ ಮಾರಕವಾಗಿರುವ, ಕೌಟುಂಬಿಕ ಕಲಹಗಳಿಗೂ ವಿಘಟನೆಗೂ ಕಾರಣವಾಗಿರುವ ಮದ್ಯ-ಮಾದಕದ ವಿರುದ್ಧ ಎಸ್ಸೆಸ್ಸೆಫ್ ರಾಜ್ಯದಾದ್ಯಂತ ಜಾಗೃತಿ ಅಭಿಯಾನವನ್ನು ಕೈಗೊಂಡಿದೆ.
ಕೊರೋನಾ ಕಾಲದಲ್ಲಿ ನೇರವಾಗಿ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗದಿದ್ದರೂ ಯುವ ಪೀಳಿಗೆ ನೆಚ್ಚಿನ ಸಾಮಾಜಿಕ ಜಾಲ ತಾಣಗಳಲ್ಲಿ ಉಪನ್ಯಾಸ, ಲೇಖನ, ವಿವಿಧ ಸ್ಪರ್ಧೆಗಳ ಮುಖಾಂತರ ಜಾಗೃತಿ ಮೂಡಿಸುವುದುರೊಂದಿಗೆ ಮದ್ಯ ಮಾದಕ ವಸ್ತುಗಳ ವಿರುದ್ಧ ನಿಲುವನ್ನು ಕೈಗೊಳ್ಳಲು ಸರ್ಕಾರವನ್ನು ಆಗ್ರಹಿಸುತ್ತಿದೆ.
ಅದಕ್ಕೆ ಪೂರಕವಾದ ಯೋಜನೆಗಳನ್ನು ರಾಜ್ಯ ಕ್ಯಾಂಪಸ್ ವಿಭಾಗವು ಈಗಾಗಲೇ ಸುತ್ತೋಲೆ ಕಳುಹಿಸಲಾಗಿ ರಾಜ್ಯದಾದ್ಯಂತ ಎಲ್ಲ ಘಟಕಗಳೂ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಕ್ರಿಯವಾಗಿ ಅಭಿಯಾನದಲ್ಲಿ ನಿರತವಾಗಿದೆ. ಈ ಅಭಿಯಾನವನ್ನು ಸರ್ವರೂ ಬೆಂಬಲಿಸಿ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ಹೊಸತೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ