ನವದೆಹಲಿ:ದೇಶದಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ವಿಮಾನಯಾನ ಸೇವೆಗಳನ್ನು ಪುನರಾರಂಭಿಸುವಂತೆ ಭಾರತ, ವಿವಿಧ ದೇಶಗಳ ಮನವೊಲಿಕೆಗೆ ಮುಂದಾಗಿದೆ. ಪ್ರಯಾಣ ನಿಷೇಧವನ್ನು ತೆಗೆದುಹಾಕಲು ವಿವಿಧ ದೇಶಗಳೊಂದಿಗೆ ಚರ್ಚೆಯನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿದೆ.
ಮುನ್ನೆಚ್ಚರಿಕೆ ಕ್ರಮಗಳನ್ನು ಬಲಪಡಿಸಿ, ವಿಮಾನ ಪ್ರಯಾಣಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಚರ್ಚೆಗೆ ಮುಂದಾಗಿದೆ.ಕೋವಿಡ್ ಎರಡನೇ ತರಂಗದ ಹಿನ್ನೆಲೆಯಲ್ಲಿ ಅನೇಕ ದೇಶಗಳು ಭಾರತದ ಮೇಲೆ ಪ್ರಯಾಣ ನಿಷೇಧವನ್ನು ವಿಧಿಸಿವೆ.ಏಪ್ರಿಲ್ನಲ್ಲಿ ಏರ್ಪಡಿಸಿದ್ದ ನಿಷೇಧವು ಅನಿರ್ದಿಷ್ಟವಾಗಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತ ಮಧ್ಯಪ್ರವೇಶಿಸಿದೆ.
ಭಾರತವು ಗಲ್ಫ್ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ಏರ್ ಬಬಲ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ.ದಿನಕ್ಕೆ ನಾಲ್ಕು ಲಕ್ಷಕ್ಕೂ ಅಧಿಕವಾಗಿದ್ದ ಕೋವಿಡ್ ರೋಗಿಗಳ ಸಂಖ್ಯೆ ಈಗ ಅರ್ಧ ಲಕ್ಷಕ್ಕಿಂತ ಕಡಿಮೆಯಾಗಿದೆ. ಲಸಿಕೆ ಹಾಕಿದವರಿಗೆ ಪ್ರಯಾಣಿಸಲು ಅನುಮತಿ ನೀಡುವ ಯುರೋಪಿಯನ್ ರಾಷ್ಟ್ರಗಳ ಕ್ರಮದಿಂದ ಭಾರತವೂ ಪ್ರೇರಿತವಾಗಿದೆ.
ಪ್ರಯಾಣವನ್ನು ಪುನರಾರಂಭಿಸಲು ಸರ್ಕಾರ ವಿವಿಧ ದೇಶಗಳೊಂದಿಗೆ ಚರ್ಚೆಯನ್ನು ಮುಂದುವರಿಸಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಕ್ಷಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ