ನವದೆಹಲಿ:ದೇಶದಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ವಿಮಾನಯಾನ ಸೇವೆಗಳನ್ನು ಪುನರಾರಂಭಿಸುವಂತೆ ಭಾರತ, ವಿವಿಧ ದೇಶಗಳ ಮನವೊಲಿಕೆಗೆ ಮುಂದಾಗಿದೆ. ಪ್ರಯಾಣ ನಿಷೇಧವನ್ನು ತೆಗೆದುಹಾಕಲು ವಿವಿಧ ದೇಶಗಳೊಂದಿಗೆ ಚರ್ಚೆಯನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿದೆ.
ಮುನ್ನೆಚ್ಚರಿಕೆ ಕ್ರಮಗಳನ್ನು ಬಲಪಡಿಸಿ, ವಿಮಾನ ಪ್ರಯಾಣಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಚರ್ಚೆಗೆ ಮುಂದಾಗಿದೆ.ಕೋವಿಡ್ ಎರಡನೇ ತರಂಗದ ಹಿನ್ನೆಲೆಯಲ್ಲಿ ಅನೇಕ ದೇಶಗಳು ಭಾರತದ ಮೇಲೆ ಪ್ರಯಾಣ ನಿಷೇಧವನ್ನು ವಿಧಿಸಿವೆ.ಏಪ್ರಿಲ್ನಲ್ಲಿ ಏರ್ಪಡಿಸಿದ್ದ ನಿಷೇಧವು ಅನಿರ್ದಿಷ್ಟವಾಗಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತ ಮಧ್ಯಪ್ರವೇಶಿಸಿದೆ.
ಭಾರತವು ಗಲ್ಫ್ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ಏರ್ ಬಬಲ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ.ದಿನಕ್ಕೆ ನಾಲ್ಕು ಲಕ್ಷಕ್ಕೂ ಅಧಿಕವಾಗಿದ್ದ ಕೋವಿಡ್ ರೋಗಿಗಳ ಸಂಖ್ಯೆ ಈಗ ಅರ್ಧ ಲಕ್ಷಕ್ಕಿಂತ ಕಡಿಮೆಯಾಗಿದೆ. ಲಸಿಕೆ ಹಾಕಿದವರಿಗೆ ಪ್ರಯಾಣಿಸಲು ಅನುಮತಿ ನೀಡುವ ಯುರೋಪಿಯನ್ ರಾಷ್ಟ್ರಗಳ ಕ್ರಮದಿಂದ ಭಾರತವೂ ಪ್ರೇರಿತವಾಗಿದೆ.
ಪ್ರಯಾಣವನ್ನು ಪುನರಾರಂಭಿಸಲು ಸರ್ಕಾರ ವಿವಿಧ ದೇಶಗಳೊಂದಿಗೆ ಚರ್ಚೆಯನ್ನು ಮುಂದುವರಿಸಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಕ್ಷಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ