ನವದೆಹಲಿ:ದೇಶದಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ವಿಮಾನಯಾನ ಸೇವೆಗಳನ್ನು ಪುನರಾರಂಭಿಸುವಂತೆ ಭಾರತ, ವಿವಿಧ ದೇಶಗಳ ಮನವೊಲಿಕೆಗೆ ಮುಂದಾಗಿದೆ. ಪ್ರಯಾಣ ನಿಷೇಧವನ್ನು ತೆಗೆದುಹಾಕಲು ವಿವಿಧ ದೇಶಗಳೊಂದಿಗೆ ಚರ್ಚೆಯನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿದೆ.
ಮುನ್ನೆಚ್ಚರಿಕೆ ಕ್ರಮಗಳನ್ನು ಬಲಪಡಿಸಿ, ವಿಮಾನ ಪ್ರಯಾಣಕ್ಕೆ ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ಚರ್ಚೆಗೆ ಮುಂದಾಗಿದೆ.ಕೋವಿಡ್ ಎರಡನೇ ತರಂಗದ ಹಿನ್ನೆಲೆಯಲ್ಲಿ ಅನೇಕ ದೇಶಗಳು ಭಾರತದ ಮೇಲೆ ಪ್ರಯಾಣ ನಿಷೇಧವನ್ನು ವಿಧಿಸಿವೆ.ಏಪ್ರಿಲ್ನಲ್ಲಿ ಏರ್ಪಡಿಸಿದ್ದ ನಿಷೇಧವು ಅನಿರ್ದಿಷ್ಟವಾಗಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತ ಮಧ್ಯಪ್ರವೇಶಿಸಿದೆ.
ಭಾರತವು ಗಲ್ಫ್ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳಿಗೆ ಏರ್ ಬಬಲ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಸ್ಥಾಪಿಸುವ ಪ್ರಕ್ರಿಯೆಯಲ್ಲಿದೆ.ದಿನಕ್ಕೆ ನಾಲ್ಕು ಲಕ್ಷಕ್ಕೂ ಅಧಿಕವಾಗಿದ್ದ ಕೋವಿಡ್ ರೋಗಿಗಳ ಸಂಖ್ಯೆ ಈಗ ಅರ್ಧ ಲಕ್ಷಕ್ಕಿಂತ ಕಡಿಮೆಯಾಗಿದೆ. ಲಸಿಕೆ ಹಾಕಿದವರಿಗೆ ಪ್ರಯಾಣಿಸಲು ಅನುಮತಿ ನೀಡುವ ಯುರೋಪಿಯನ್ ರಾಷ್ಟ್ರಗಳ ಕ್ರಮದಿಂದ ಭಾರತವೂ ಪ್ರೇರಿತವಾಗಿದೆ.
ಪ್ರಯಾಣವನ್ನು ಪುನರಾರಂಭಿಸಲು ಸರ್ಕಾರ ವಿವಿಧ ದೇಶಗಳೊಂದಿಗೆ ಚರ್ಚೆಯನ್ನು ಮುಂದುವರಿಸಲಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಕ್ಷಿ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)