ಬೆಳ್ತಂಗಡಿ: ಅಂತಾರಾಷ್ಟ್ರೀಯ ಮಾದಕದ್ರವ್ಯ ಸೇವನೆ, ಕಳ್ಳಸಾಗಣಿಕೆ ವಿರೋಧಿ ದಿನದ ಅಂಗವಾಗಿ ಎಸ್ಸೆಸ್ಸೆಫ್ ಕ್ಯಾಂಪಸ್ ದ.ಕ ಜಿಲ್ಲೆ (ಈಸ್ಟ್) ವತಿಯಿಂದ ಮಾದಕದ್ರವ್ಯ ಸೇವನೆಯ ವಿರುದ್ದ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಆನ್ಲೈನ್ ಮೂಲಕ ನಡೆಸಲಾಯಿತು.
ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿ ಮಂಡೆಕೋಲು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ರಾಜ್ಯ ಪ್ರ. ಕಾರ್ಯದರ್ಶಿ ಡಾ. ಎಂ.ಎಸ್.ಎಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಮಾತನಾಡಿ, ಮನುಕುಲದ ಮುಂದಿರುವ ಅತೀ ದೊಡ್ಡ ಸವಾಲಾಗಿರುವ ಅಮಲು ಪದಾರ್ಥಗಳ ಸೇವನೆಯಿಂದ ಈ ಸಮಾಜವನ್ನು ಮುಕ್ತಿಗೊಳಿಸಲು ಧಾರ್ಮಿಕ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳು, ಯುವಜನ ಸಂಘಟನೆಗಳು ಜಾಗೃತಿ ಅಭಿಯಾನಗಳನ್ನು ಕೈಗೊಳ್ಳುವುದರ ಮೂಲಕ ಮಾತ್ರ ಸಾದ್ಯ ಎಂದು ಅಭಿಪ್ರಾಯಪಟ್ಟರು.
ವೈದ್ಯಕೀಯ ಸಲಹಾ ತಜ್ಞರಾದ ಡಾ. ವೆಂಕಟಕೃಷ್ಣ ಭಟ್ ಸುಳ್ಯ ಮುಖ್ಯ ಅತಿಥಿಗಳಾಗಿ ಮಾತನಾಡಿ, ಮಾನಸಿಕ ಸ್ಥಿರತೆಯನ್ನು ಚಂಚಲಗೊಳಿಸುವ ಮಾದಕ ವಸ್ತುಗಳ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮೂಲಕ ಜೀವನದ ಅಂತ್ಯಕ್ಕೆ ಕಾರಣವಾಗುತ್ತದೆ ಎಂದರು . ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಸವಿವರವಾಗಿ ಮಾತನಾಡಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಾಯ್ಸ್ ಮಾತನಾಡಿ, ಅಮಲು ಪದಾರ್ಥಗಳ ಮಾರಾಟ ಜಾಲದಲ್ಲಿ ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಹಿನ್ನೆಲೆಯಲ್ಲಿ ಯುವ ಜನತೆ ಎಚ್ಚೆತ್ತುಕೊಳ್ಳುವುದರೊಂದಿಗೆ ಸ್ವತಃ ಜಾಗೃತರಾಗಿ ಇತರರಿಗೆ ಜಾಗೃತಿ ಮೂಡಿಸಬೇಕೆಂಬ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ರಶೀದ್ ಮಡಂತ್ಯಾರು ಸ್ವಾಗತಿಸಿ, ಕನ್ವೀನರ್ ಅಶ್ಫಾಕ್ ಕೊಡುಂಗಾಯಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ