ಜೂನ್ 30 ; ಕರ್ನಾಟಕ ಮುಸ್ಲಿಂ ಜಮಾಅತ್ ವತಿಯಿಂದ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಪ್ರಾಯೋಜಕತ್ವದಲ್ಲಿ ರಾಜ್ಯಾದ್ಯಂತ ಸಹಾಯ್ ಪಡಿತರ ಕಿಟ್ ವಿತರಣೆಯು ನಡೆಯಲಿದ್ದು, ದಿನಾಂಕ 01-07-2021, ಗುರುವಾರ ಮಧ್ಯಾಹ್ನ 2 ಗಂಟೆಗೆ ಮಂಗಳೂರಿನಲ್ಲಿ ಚಾಲನೆ ದೊರಕಲಿದೆ.
ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಪ್ರಾರ್ಥನೆಗೆ ನೇತೃತ್ವ ನೀಡುವರು.
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆ ವಹಿಸಲಿದ್ದು, ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ.ಹಾಜಿ ಶೇಕ್ ಬಾವಾ ಅಬೂದಾಬಿ ಸಭೆಯನ್ನು ಉದ್ಘಾಟಿಸಲಿದ್ದಾರೆ.
ಸಹಾಯ್ ರಾಜ್ಯ ಪ್ಲಾನಿಂಗ್ ಸೆಲ್ ಚೇರ್ಮೇನ್ ಆಗಿರುವ ಅಬ್ದುಲ್ ಹಮೀದ್ ಬಜ್ಪೆ ಮುನ್ನುಡಿ ಮಾತುಗಳನ್ನಾಡುವರು. ಗಣ್ಯ ಅತಿಥಿಗಳಾಗಿ
SMA ಅಧ್ಯಕ್ಷರಾದ ಸಯ್ಯಿದ್ ಜಲಾಲುದ್ದೀನ್ ಅಲ್-ಹಾದಿ ತಂಙಳ್ ಮಲ್ಜಅ್, ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಮ್ತಾಝ್ ಅಲಿ ಕೃಷ್ಣಾಪುರ, ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಪಿ.ಎ.ಉಸ್ಮಾನ್ ಸಅದಿ ಪಟ್ಟೋರಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ
ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ, SEDC ಅಧ್ಯಕ್ಷ ಕೆಕೆಎಂ ಕಾಮಿಲ್ ಸಖಾಫಿ, SJM ರಾಜ್ಯಾಧ್ಯಕ್ಷ ಅಬ್ದುರ್ರಹ್ಮಾನ್ ಮದನಿ ಜೆಪ್ಪು, ಮುಸ್ಲಿಂ ಜಮಾಅತ್ ಮಂಗಳೂರು ತಾಲೂಕು ಅಧ್ಯಕ್ಷ ಬಿ.ಎ. ಅಬ್ದುನ್ನಾಸಿರ್ ಲಕ್ಕಿಸ್ಟಾರ್, ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಿ.ಪಿ.ಯೂಸುಫ್ ಸಖಾಫಿ ಬೈತಾರ್, ಸಹಾಯ್ ರಾಜ್ಯ ಪ್ಲಾನಿಂಗ್ ಸೆಲ್ ಕನ್ವೀನರ್ ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು, ಸಹಾಯ್ ರಾಜ್ಯ ಕೋಡಿನೇಟರ್ ಅಶ್ರಫ್ ಕಿನಾರ ಮಂಗಳೂರು, ಸಹಾಯ್ ದ.ಕ.ಜಿಲ್ಲಾ ಕೋಡಿನೇಟರ್ ಸಿರಾಜುದ್ದೀನ್ ಇನ್ನಿತರ ನಾಯಕರು ಭಾಗವಹಿಸುವರು.