ನವದೆಹಲಿ,ಜು.06: ಕೊರೋನಾ 2ನೇ ಅಲೆಯಿಂದ, ಕಠಿಣ ನಿರ್ಬಂಧ, ಸೂಕ್ತ ಚಿಕಿತ್ಸೆ ಹಾಗೂ ಲಸಿಕೆ ಮೂಲಕ ವೈರಸ್ ನಿಯಂತ್ರಣಕ್ಕೆ ಬಂದಿದೆ.ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಅನ್ಲಾಕ್ ಜಾರಿಯಾಗಿದೆ. ಅನ್ಲಾಕ್ ಒಂದೊಂದೆ ಹಂತಕ್ಕೆ ವಿಸ್ತರಣೆಯಾಗುತ್ತಿದ್ದಂತೆ ಇದೀಗ ಕೇಂದ್ರ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ ನಡೆಸಿ ಮತ್ತೆ ಲಾಕ್ಡೌನ್ ಎಚ್ಚರಿಕೆ ನೀಡಿದೆ.
ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಲಾಕ್ಡೌನ್ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಅನ್ಲಾಕ್ ಘೋಷಣೆಯಾದ ಬೆನ್ನಲ್ಲೇ ಹಿಮಾಚಲ ಪ್ರದೇಶ, ಕುಲು, ಮನಾಲಿ ಸೇರಿದಂತೆ ಪ್ರವಾಸಿ ತಾಣಗಳಿಗೆ ಜನ ಸಾಗರವೇ ಹರಿದುಬಂದಿದೆ. ಶೇಕಡಾ 90 ರಷ್ಟು ಕೊರೋನಾ ನಿಯಮ ಪಾಲಿಸುತ್ತಿಲ್ಲ. ಇದು ಅಪಾಯಕ್ಕೆ ಅಹ್ವಾನ ನೀಡಿದಂತೆ. ಹೀಗಾಗಿ ಮತ್ತೊಂದು ಲಾಕ್ಡೌನ್ ಸಂಕಷ್ಟ ತರಬೇಡಿ ಎಂದು ಜನರಿಗೆ ಎಚ್ಚರಿಸಿದ್ದಾರೆ.
ಮಸೂರಿ, ಉತ್ತರಖಂಡ, ಶಿಮ್ಲಾ, ಧರ್ಮಶಾಲಾದಲ್ಲೂ ಪ್ರವಾಸಿಗರು ಸಂಖ್ಯೆ ದಿಢೀರ್ ಹೆಚ್ಚಾಗಿದೆ. ಕೊರೋನಾ ಮಾರ್ಗಸೂಚಿ ಪಾಲನೆ ಅಗತ್ಯ. 2ನೇ ಅಲೆ ಇನ್ನೂ ಸಂಪೂರ್ಣವಾಗಿ ತಗ್ಗಿಲ್ಲ. ಜೊತೆಗೆ ಡೆಲ್ಟಾ ಪ್ಲಸ್, 3ನೇ ಅಲೆ ಭೀತಿ ಕೂಡ ನಮ್ಮ ಮುಂದಿದೆ. ಹೀಗಾಗಿ ಜನರ ಅಜಾಗರೂಕತೆಯಿಂದ ಅಮಾಯಕರನ್ನು ಬಲಿಯಾಗಿಸಬೇಡಿ ಎಂದು ಲಾವ್ ಅಗರ್ವಾಲ್ ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ