ನವದೆಹಲಿ,ಜು.06: ಕೊರೋನಾ 2ನೇ ಅಲೆಯಿಂದ, ಕಠಿಣ ನಿರ್ಬಂಧ, ಸೂಕ್ತ ಚಿಕಿತ್ಸೆ ಹಾಗೂ ಲಸಿಕೆ ಮೂಲಕ ವೈರಸ್ ನಿಯಂತ್ರಣಕ್ಕೆ ಬಂದಿದೆ.ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಅನ್ಲಾಕ್ ಜಾರಿಯಾಗಿದೆ. ಅನ್ಲಾಕ್ ಒಂದೊಂದೆ ಹಂತಕ್ಕೆ ವಿಸ್ತರಣೆಯಾಗುತ್ತಿದ್ದಂತೆ ಇದೀಗ ಕೇಂದ್ರ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ ನಡೆಸಿ ಮತ್ತೆ ಲಾಕ್ಡೌನ್ ಎಚ್ಚರಿಕೆ ನೀಡಿದೆ.
ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಲಾಕ್ಡೌನ್ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಅನ್ಲಾಕ್ ಘೋಷಣೆಯಾದ ಬೆನ್ನಲ್ಲೇ ಹಿಮಾಚಲ ಪ್ರದೇಶ, ಕುಲು, ಮನಾಲಿ ಸೇರಿದಂತೆ ಪ್ರವಾಸಿ ತಾಣಗಳಿಗೆ ಜನ ಸಾಗರವೇ ಹರಿದುಬಂದಿದೆ. ಶೇಕಡಾ 90 ರಷ್ಟು ಕೊರೋನಾ ನಿಯಮ ಪಾಲಿಸುತ್ತಿಲ್ಲ. ಇದು ಅಪಾಯಕ್ಕೆ ಅಹ್ವಾನ ನೀಡಿದಂತೆ. ಹೀಗಾಗಿ ಮತ್ತೊಂದು ಲಾಕ್ಡೌನ್ ಸಂಕಷ್ಟ ತರಬೇಡಿ ಎಂದು ಜನರಿಗೆ ಎಚ್ಚರಿಸಿದ್ದಾರೆ.
ಮಸೂರಿ, ಉತ್ತರಖಂಡ, ಶಿಮ್ಲಾ, ಧರ್ಮಶಾಲಾದಲ್ಲೂ ಪ್ರವಾಸಿಗರು ಸಂಖ್ಯೆ ದಿಢೀರ್ ಹೆಚ್ಚಾಗಿದೆ. ಕೊರೋನಾ ಮಾರ್ಗಸೂಚಿ ಪಾಲನೆ ಅಗತ್ಯ. 2ನೇ ಅಲೆ ಇನ್ನೂ ಸಂಪೂರ್ಣವಾಗಿ ತಗ್ಗಿಲ್ಲ. ಜೊತೆಗೆ ಡೆಲ್ಟಾ ಪ್ಲಸ್, 3ನೇ ಅಲೆ ಭೀತಿ ಕೂಡ ನಮ್ಮ ಮುಂದಿದೆ. ಹೀಗಾಗಿ ಜನರ ಅಜಾಗರೂಕತೆಯಿಂದ ಅಮಾಯಕರನ್ನು ಬಲಿಯಾಗಿಸಬೇಡಿ ಎಂದು ಲಾವ್ ಅಗರ್ವಾಲ್ ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ