ನವದೆಹಲಿ,ಜು.06: ಕೊರೋನಾ 2ನೇ ಅಲೆಯಿಂದ, ಕಠಿಣ ನಿರ್ಬಂಧ, ಸೂಕ್ತ ಚಿಕಿತ್ಸೆ ಹಾಗೂ ಲಸಿಕೆ ಮೂಲಕ ವೈರಸ್ ನಿಯಂತ್ರಣಕ್ಕೆ ಬಂದಿದೆ.ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಅನ್ಲಾಕ್ ಜಾರಿಯಾಗಿದೆ. ಅನ್ಲಾಕ್ ಒಂದೊಂದೆ ಹಂತಕ್ಕೆ ವಿಸ್ತರಣೆಯಾಗುತ್ತಿದ್ದಂತೆ ಇದೀಗ ಕೇಂದ್ರ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ ನಡೆಸಿ ಮತ್ತೆ ಲಾಕ್ಡೌನ್ ಎಚ್ಚರಿಕೆ ನೀಡಿದೆ.
ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಲಾಕ್ಡೌನ್ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಅನ್ಲಾಕ್ ಘೋಷಣೆಯಾದ ಬೆನ್ನಲ್ಲೇ ಹಿಮಾಚಲ ಪ್ರದೇಶ, ಕುಲು, ಮನಾಲಿ ಸೇರಿದಂತೆ ಪ್ರವಾಸಿ ತಾಣಗಳಿಗೆ ಜನ ಸಾಗರವೇ ಹರಿದುಬಂದಿದೆ. ಶೇಕಡಾ 90 ರಷ್ಟು ಕೊರೋನಾ ನಿಯಮ ಪಾಲಿಸುತ್ತಿಲ್ಲ. ಇದು ಅಪಾಯಕ್ಕೆ ಅಹ್ವಾನ ನೀಡಿದಂತೆ. ಹೀಗಾಗಿ ಮತ್ತೊಂದು ಲಾಕ್ಡೌನ್ ಸಂಕಷ್ಟ ತರಬೇಡಿ ಎಂದು ಜನರಿಗೆ ಎಚ್ಚರಿಸಿದ್ದಾರೆ.
ಮಸೂರಿ, ಉತ್ತರಖಂಡ, ಶಿಮ್ಲಾ, ಧರ್ಮಶಾಲಾದಲ್ಲೂ ಪ್ರವಾಸಿಗರು ಸಂಖ್ಯೆ ದಿಢೀರ್ ಹೆಚ್ಚಾಗಿದೆ. ಕೊರೋನಾ ಮಾರ್ಗಸೂಚಿ ಪಾಲನೆ ಅಗತ್ಯ. 2ನೇ ಅಲೆ ಇನ್ನೂ ಸಂಪೂರ್ಣವಾಗಿ ತಗ್ಗಿಲ್ಲ. ಜೊತೆಗೆ ಡೆಲ್ಟಾ ಪ್ಲಸ್, 3ನೇ ಅಲೆ ಭೀತಿ ಕೂಡ ನಮ್ಮ ಮುಂದಿದೆ. ಹೀಗಾಗಿ ಜನರ ಅಜಾಗರೂಕತೆಯಿಂದ ಅಮಾಯಕರನ್ನು ಬಲಿಯಾಗಿಸಬೇಡಿ ಎಂದು ಲಾವ್ ಅಗರ್ವಾಲ್ ಎಚ್ಚರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)