ಬೆಂಗಳೂರು: ರಾಜ್ಯದಲ್ಲಿ ಅನ್ಲಾಕ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ, ಅನುದಾನಿತ ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳ ಶೇ.100 ಬೋಧಕ-ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣ ಕಡಿಮೆಯಾಗುತ್ತಿದ್ದು, ಸರ್ಕಾರವೂ ಈಗಾಗಲೆ, ಅನ್ಲಾಕ್ 3.0 ಘೋಷಣೆ ಮಾಡಿದೆ. ಸರ್ಕಾರದ ಎಲ್ಲ ಸಿಬ್ಬಂದಿ ಶೇ.100 ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ಕರೊನಾ ನಿಯಮ ಪಾಲಿಸಿಕೊಂಡು, ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಮೊದಲು ಎರಡನೇ ಅಲೆಯ ಹಿನ್ನೆಲೆಯಲ್ಲಿ ಉಪನ್ಯಾಸಕರಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿತ್ತು. ಬಹುತೇಕ ಉಪನ್ಯಾಸಕರು ಕಲಿಕಾ ನಿರ್ವಹಣಾ ವ್ಯವಸ್ಥೆ(ಎಲ್ಎಂಎಸ್)ಗೆ ಕಲಿಕಾ ಸಾಮಗ್ರಿಯ ಸಿದ್ಧತೆ, ಆನ್ಲೈನ್ ಪಾಠ ಸೇರಿದಂತೆ ಕಾಲೇಜಿನ ಬಹುತೇಕ ಕಾರ್ಯವನ್ನು ಮನೆಯಿಂದಲೇ ಮಾಡುತ್ತಿದ್ದರು. ಕೆಲವೇ ಕೆಲವು ಉಪನ್ಯಾಸಕರು ಮಾತ್ರ ಪ್ರಾಂಶುಪಾಲರ ಸೂಚನೆಯಂತೆ ಕಾಲೇಜಿಗೆ ಬರುತ್ತಿದ್ದರು. ಈಗ ರಾಜ್ಯಾದ್ಯಂತ ಅನ್ಲಾಕ್ ಘೋಷಣೆಯಾಗಿರುವುದರಿಂದ ಎಲ್ಲರೂ ಕಾಲೇಜಿಗೆ ಬರಲು ಸೂಚನೆ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ