ದಮ್ಮಾಮ್ :ಸಾಂತ್ವನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಕೆ.ಸಿ.ಎಫ್ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ
ರಕ್ತದಾನ ಮಾಡುವ ಮೂಲಕ ರೋಗಿಗಳಿಗೆ ಆಸರೆಯಾಗಿದ್ದಾರೆ.
ದಮ್ಮಾಮ್, ಜುಬೈಲ್ ಹಾಗೂ ಸೌದಿ ಅರೇಬಿಯಾದ ಯಾವುದೇ ಸ್ಥಳದಲ್ಲಿ ರಕ್ತದಾನ ಹಾಗು ಇನ್ನಿತರ ಸಾಂತ್ವನ ಕಾರ್ಯದಲ್ಲಿ ಕೆ.ಸಿ.ಎಫ್ ಸಂಘಟನೆ ಬಲಿಷ್ಟ ತಂಡವೊಂದನ್ನು ಕಟ್ಟಿ ಕಷ್ಟದಲ್ಲಿರುವ ಗಲ್ಫ್ ಕನ್ನಡಿಗರ ಕಣ್ಣೀರೊರೆಸುವ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ.

ಕಳೆದ ಕೆಲವು ತಿಂಗಳುಗಳಿಂದ ಕೋವಿಡ್ ಹಾಗು ಇನ್ನಿತರ ರೋಗದಲ್ಲಿರುವ ರೋಗಿಗಳಿಗೆ ರಕ್ತದ ಅವಶ್ಯಕತೆಯ ಮನವಿ ಕೋರಿ ಬಂದಾಗ ಜುಬೈಲ್ ಸಿಟಿ ಸೆಕ್ಟರ್ ಸಾಂತ್ವನ ತಂಡವು ಕೂಡಲೇ ರಕ್ತದಾನ ಮಾಡಿ ಸ್ಪಂದಿಸುತ್ತಾ ಬಂದಿದೆ.
ವಿಶೇಷವಾಗಿ ಕಳೆದ ತಿಂಗಳು ಬಹಳ ಕಡಿಮೆ ಸಿಗುವ O ನೆಗಟೀವ್ ರಕ್ತವನ್ನು ಕೂಡಲೆ ವ್ಯವಸ್ಥೆಮಾಡಿ ದಾನ ಮಾಡಿದೆ. ಈ ಒಂದು ವ್ಯತ್ಯಸ್ಥ ಕಾರ್ಯಾಚರಣೆಯಿಂದ ಆಸ್ಪತ್ರೆ ಸಿಬ್ಬಂಧಿಗಳು ಹಾಗೂ ರೋಗಿಯ ಕುಟುಂಬಸ್ಥರು ಬ್ಲಡ್ ಸೈಬೋ ತಂಡವನ್ನು ಶ್ಲಾಘಿಸಿದ್ದಾರೆ.ಹಾಗು ಆಸ್ಪತ್ರೆಯ ವತಿಯಿಂದ ಅಭಿನಂಧನಾ ಪತ್ರವನ್ನು ನೀಡಿ ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಕೆಸಿಎಫ್ ದಮ್ಮಾಮ್ ಝೋನ್ ಅಧ್ಯಕ್ಷರಾದ ರಶೀದ್ ಸಖಾಫಿ, ಝೋನ್ ಸಾಂತ್ವನ ಕನ್ವೀನರ್ ಭಾಷಾ ಗಂಗಾವಳಿ, ಹಾಗು ಜುಬೈಲ್ ಸಿಟಿ ಸೆಕ್ಟರ್ ಸಾಂತ್ವನ ತಂಡದ ನಾಯಕ ನೌಫಲ್ ಮುಲ್ಕಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು