ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹೊತ್ತಿಗೆ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿಯ ವಿರುದ್ದ ತೊಡೆ ತಟ್ಟಿದ್ದ ಮಮತಾ ಬ್ಯಾನರ್ಜಿ ಅವರು, ಸುವೇಂದು ಅಧಿಕಾರಿಯನ್ನು ಸೋಲಿಸಲೇ ಬೇಕು ಎನ್ನುವ ಜಿದ್ದಿಗೆ ಬಿದ್ದು ತಮಗೆ ರಾಜಕೀಯ ಮರುಹುಟ್ಟನ್ನು ಕೊಟ್ಟಂತಹ ನಂದಿಗ್ರಾಮಕ್ಕೆ ಹೋಗಿ ಚುನಾವಣೆಯನ್ನು ಎದುರಿಸಿದ್ದರು.
ಆದರೆ ಕೊನೆ ಗಳಿಗೆಯಲ್ಲಿ ಅತ್ಯಂತ ಗೊಂದಲಕಾರಿಯಾದಂತಹ ಫಲಿತಾಂಶ ಬಂದಿತ್ತು. ಇದರ ಬಗ್ಗೆ ಸಾಕಷ್ಟು ರಾಜಕೀಯ ಪರಿಣಿತರು ಅನುಮಾನ ವ್ಯಕ್ತಪಡಿಸಿದ್ದರು. ಆಗ ಕೋರ್ಟ್ ಮಮತಾ ಅವರು ಕೋರ್ಟ್ ಮೆಟ್ಟಿಲೇರಿದ್ದರು.
ನಂದಿಗ್ರಾಮ ಕ್ಷೇತ್ರದಿಂದ ವಿಜೇತರಾಗಿರುವ ಬಿಜೆಪಿಯ ಸುವೇಂದು ಅಧಿಕಾರಿ ಅವರ ಆಯ್ಕೆ ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಚುನಾವಣಾ ಮನವಿಗೆ ಸಂಬಂಧಿಸಿದಂತೆ ಸುವೇಂದು ಅವರಿಗೆ ಬುಧವಾರ ಕಲ್ಕತ್ತಾ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆಕ್ಷೇಪಾರ್ಹವಾದ ಚುನಾವಣೆಗೆ ಸಂಬಂಧಿಪಟ್ಟಿರುವ ಎಲ್ಲಾ ದಾಖಲೆಗಳು, ಚುನಾವಣಾ ಪತ್ರಗಳು, ಸಾಧನಗಳು, ವಿಡಿಯೊ ರೆಕಾರ್ಡಿಂಗ್ ಇತ್ಯಾದಿಯನ್ನು ಸಂಬಂಧಪಟ್ಟ ಸಂಸ್ಥೆಯು ಸಂಗ್ರಹಿಸಿಡಬೇಕು ಎಂದು ನ್ಯಾಯಮೂರ್ತಿ ಶಂಪಾ ಸರ್ಕಾರ್ ನೇತೃತ್ವದ ಏಕಸದಸ್ಯ ಪೀಠವು ನಿರ್ದೇಶಿಸಿದೆ.
ಮೇ 21ರ ರಿಜಿಸ್ಟ್ರಾರ್ ಅವರ ವರದಿಯನ್ನು ಪರಿಶೀಲಿಸಿದ ಪೀಠವು ಅರ್ಜಿಯಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದಿದೆ. “ಕಚೇರಿಯ ವರದಿಯ ಅನುಸಾರ ಪ್ರಜಾ ಪ್ರತಿನಿಧಿ ಕಾಯಿದೆಯ ಸೆಕ್ಷನ್ 86(1)ರ ಅಡಿ ಚುನಾವಣಾ ಮನವಿಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಈ ನ್ಯಾಯಾಲಯವು ರೂಪಿಸಿರುವ ಚುನಾವಣಾ ಮನವಿ ನಿಯಮಗಳ ಅಡಿ ನಿಯಮ 24ರ ಅಡಿ ನೋಟಿಸ್ ಜಾರಿ ಮಾಡಲಾಗುವುದು. ಆಗಸ್ಟ್ 12ರೊಳಗೆ ಪ್ರತಿಕ್ರಿಯೆ ಸಲ್ಲಿಸಬೇಕು” ಎಂದು ನ್ಯಾಯಾಲಯ ಆದೇಶ ಮಾಡಿದೆ.
ಚುನಾವಣಾ ಮನವಿ ಸಲ್ಲಿಸುವುದಕ್ಕೆ ಸಂಬಂಧಿಸಿದಂತೆ ಕಾರ್ಯವಿಧಾನ ಅವಶ್ಯಕತೆಗಳನ್ನು ಅನುಸರಿಸಲಾಗಿದೆ. ಪ್ರಕರಣ ದಾಖಲಿಸುವುದಕ್ಕೆ ಸಂಬಂಧಿಸಿದ ಕಾಲಾನುಕ್ರಮಣಿಕೆಯನ್ನು ಮಮತಾ ಬ್ಯಾನರ್ಜಿ ಪರ ಹಿರಿಯ ವಕೀಲ ಸೌಮೇಂದ್ರ ನಾಥ್ ಮುಖರ್ಜಿ ನ್ಯಾಯಾಲಯಕ್ಕೆ ವಿವರಿಸಿದರು.
ನ್ಯಾಯಮೂರ್ತಿ ಕೌಶಿಕ್ ಚಂದಾ ನೇತೃತ್ವದ ಪೀಠದ ಮುಂದೆ ಜೂನ್ 24ರಂದು ಪ್ರಕರಣ ವಿಚಾರಣೆಗೆ ಬಂದಾಗ ಅರ್ಜಿದಾರೆ ಮಮತಾ ಬ್ಯಾನರ್ಜಿ ಅವರು ಖುದ್ದು ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ಮುಖರ್ಜಿ ಹೇಳಿದರು. “ಸೂಕ್ತ ರೀತಿಯಲ್ಲಿ ಮನವಿ ಮಾಡಲಾಗಿದೆ. ಗೌರವಾನ್ವಿತ ನ್ಯಾಯಮೂರ್ತಿಗಳು ಬಯಸಿದರೆ ಅರ್ಜಿದಾರರು ಮತ್ತೊಮ್ಮೆ ಖುದ್ದು ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ” ಎಂದರು. ಇದಕ್ಕೆ ಪೀಠವು ಜೂನ್ 24ರಂದು ಅವರು ಹಾಜರಾಗಿದ್ದರೇʼ ಎಂದು ಪ್ರಶ್ನಿಸಿತು. ಅದಕ್ಕೆ ಮುಖರ್ಜಿ ಅವರು ʼಹೌದುʼ ಎಂದು ಉತ್ತರಿಸಿದರು.
ನೋಟಿಸ್ ಜಾರಿ ಮಾಡುವುದಕ್ಕೂ ಮುನ್ನ ಪೀಠವು ಕಾರ್ಯವಿಧಾನ ಅವಶ್ಯಕತೆಗಳನ್ನು ಪೂರೈಸಲಾಗಿದೆಯೇ ಎಂಬುದನ್ನು ಪರಿಶೀಲಿಸಿತು. ಈ ಚುನಾವಣಾ ಮನವಿಯನ್ನು ಮೊದಲಿಗೆ ನ್ಯಾ. ಚಂದಾ ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಗೊಳಿಸಲಾಗಿತ್ತು. ವಕೀಲರಾಗಿದ್ದಾಗ ನ್ಯಾ. ಚಂದಾ ಬಿಜೆಪಿಯ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಮಮತಾ ಬ್ಯಾನರ್ಜಿ ಅವರು ತಕರಾರು ಎತ್ತಿದ ಹಿನ್ನೆಲೆಯಲ್ಲಿ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು. ಇದೇ ವೇಳೆ ಮಮತಾ ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ