ಮಂಗಳೂರು: ರಾಜ್ಯಾದ್ಯಂತ ಜು.21ರಂದು ನಡೆಯುವ ಬಕ್ರೀದ್ ಹಬ್ಬಕ್ಕೆ ಸಂಬಂಧಿಸಿ ಕೋವಿಡ್-19 ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ನಿರ್ದೇಶನದಂತೆ ರಾಜ್ಯ ಸರಕಾರವು ಕೆಲವೊಂದು ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಬಕ್ರೀದ್ ದಿನದಂದು ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ (ನಮಾಝ್)ಗೆ ನಿರ್ಬಂಧ ಹೇರಲಾಗಿದೆ. ಮಸೀದಿಗಳಲ್ಲಿ 50 ಮಂದಿಗಿಂತ ಹೆಚ್ಚು ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು. ಒಂದು ವೇಳೆ ಅಧಿಕ ಮಂದಿ ಮಸೀದಿಗೆ ಆಗಮಿಸಿದರೆ ಹಂತ ಹಂತವಾಗಿ ನಮಾಝ್ ನಿರ್ವಹಿಸಲು ಅವಕಾಶ ಕಲ್ಪಿಸಬಹುದಾಗಿದೆ.
ಮಸೀದಿಗಳಲ್ಲಿ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕು, 65 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷ ಕಡಿಮೆ ವಯಸ್ಸಿನ ಮಕ್ಕಳು ಮಸೀದಿಗೆ ತೆರಳಬಾರದು. ನಮಾಝ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರವಿರಬೇಕು. ಮಸೀದಿಗೆ ಪ್ರವೇಶಿಸುವ ಮುನ್ನ ದೇಹದ ತಾಪಮಾನ ತಪಾಸಣೆ ಮಾಡಬೇಕು. ಕೈಗಳನ್ನು ಸೋಪ್ ಅಥವಾ ಸ್ಯಾನಿಟೈಝರ್ನಿಂದ ಶುಚಿಗೊಳಿಸಬೇಕು. ಮನೆಯಿಂದಲೇ ಮುಸಲ್ಲಾವನ್ನು ಕೊಂಡೊಯ್ಯಬೇಕು. ಹಸ್ತಲಾಘವ ಮತ್ತು ಆಲಿಂಗನ ಮಾಡಬಾರದು ಎಂದು ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.
ರಸ್ತೆಗಳು, ಪಾದಚಾರಿ ಮಾರ್ಗಗಳು, ಎಲ್ಲಾ ರೀತಿಯ ಆಸ್ಪತ್ರೆಯ ಆವರಣಗಳು, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲಾ ಕಾಲೇಜುಗಳಲ್ಲಿ ತರಗತಿ ನಡೆಯುತ್ತಿದ್ದಲ್ಲಿ ಅಂತಹ ಶಾಲಾ-ಕಾಲೇಜುಗಳ ಒಳ ಮತ್ತು ಹೊರ ಆವರಣಗಳಲ್ಲಿ, ಆಟದ ಮೈದಾನಗಳಲ್ಲಿ, ಮಸೀದಿ ಮತ್ತು ಇತರ ಧಾರ್ಮಿಕ ಸ್ಥಳ-ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ವಧೆ ಮತ್ತು ಬಲಿದಾನ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ