ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಮರವೂರು ಮುಖ್ಯ ರಸ್ತೆಯ ಬಳಿ ಪಿಲ್ಲರ್ ಜಗ್ಗಿ ಬಿರುಕು ಬಿಟ್ಟಿದ್ದ ಸೇತುವೆಯ ಪಿಲ್ಲರ್, ಸ್ಲ್ಯಾಬ್ ಅನ್ನು ಮೇಲಕ್ಕೆತ್ತಿ ಸೇತುವೆಯನ್ನು ಯಥಾ ಸ್ಥಿತಿಗೆ ತರಲಾಗಿದ್ದು, 2 ವಾರದೊಳಗೆ ಇನ್ನುಳಿದ ಸುರಕ್ಷಾ ಕ್ರಮಗಳನ್ನು ಪೂರೈಸಿ ಆಗಸ್ಟ್ನಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆ ಇದೆ.
ಬೆಂಗಳೂರು ಮತ್ತು ಕೇರಳದ ತಂತ್ರಜ್ಞರ ಸಲಹೆ ಪಡೆದು ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಸ್ಲ್ಯಾಬ್ ಮೇಲಕ್ಕೆತ್ತುವ ಕಾಮಗಾರಿ ಪೂರ್ಣಗೊಂಡಿದೆ. ಲೋಕೋಪಯೋಗಿ ಇಲಾಖೆಯ ಮಂಗಳೂರು ವಿಭಾಗವು ಗುತ್ತಿಗೆದಾರ ಸಂಸ್ಥೆ ಮುಗ್ರೋಡಿ ಕನ್ಸ್ಟ್ರಕ್ಷನ್ಸ್ನ ಮೂಲಕ ಕಾಮಗಾರಿಯನ್ನು ನಿರ್ವಹಿಸಿದೆ ಎಂದು ಪಿಡಬ್ಯು ಡಿ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ಆತ್ರಾಡಿ ರಾಜ್ಯ ಹೆದ್ದಾರಿ -67ರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ರಸ್ತೆಯ ಮರವೂರು ಬಳಿ ಫಲ್ಗುಣಿ ನದಿಗೆ 54 ವರ್ಷಗಳ ಹಿಂದೆ ನಿರ್ಮಿಸಿದ್ದ ಸೇತುವೆಯ ಕೊನೆಯ ಪಿಲ್ಲರ್ ಜೂನ್ 15ರ ಮುಂಜಾನೆ 2.50 ಅಡಿಗಳಷ್ಟು ಜಗ್ಗಿದ ಪರಿಣಾಮ ಸೇತುವೆ ಬಿರುಕು ಬಿಟ್ಟಿತ್ತು. ಒಂದು ತಿಂಗಳಿನಿಂದ ಇಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪಕ್ಕದಲ್ಲಿಯೇ ಹೊಸ ಸೇತುವೆ ನಿರ್ಮಾಣ ನಡೆಯುತ್ತಿದ್ದು, ಆ ಕಾಮಗಾರಿಯಿಂದಾಗಿ ಮಳೆ ನೀರು ಸೇತುವೆಯ ಪಿಲ್ಲರ್ ಇರುವಲ್ಲಿ ಒಂದೇ ಭಾಗದಲ್ಲಿ ಹರಿಯುವಂತೆ ಆದದ್ದು ಪಿಲ್ಲರ್ ಜಗ್ಗಲು ಕಾರಣ ಎಂದು ಸ್ಥಳೀಯರು ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ