ಪ್ರತಿಷ್ಠಿತ ವಿದ್ಯಾ ಸಂಸ್ಥೆ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಕುಂಬ್ರ ಇದರ ನೂತನ ಕೋಶಾಧಿ\nಕಾರಿಯಾಗಿ ಸಂಸ್ಥೆಯ ಮುಖ್ಯ ಪೋಷಕ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರಿಂದ ನೇಮಕಗೊಂಡ ಪ್ರಮುಖ ಸುನ್ನೀ ಉಮರಾ ಮುಂದಾಳು, ಸಿ.ಅಬ್ದುಲ್ ಕರೀಂ ಹಾಜಿ ಚೆನ್ನಾರ್ ಅವರನ್ನು ಇತ್ತೀಚೆಗೆ ಕುಂಬ್ರ ಮರ್ಕಝ್ನಲ್ಲಿ ಸನ್ಮಾನಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ, ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಕಾರ್ಯಾಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ಅರಿಯಡ್ಕ ಅವರು ಮೆಮೆಂಟೋ ನೀಡಿ ಕರೀಂ ಹಾಜಿಯವರನ್ನು ಗೌರವಿಸಿದರು.ಅನೇಕ ಧಾರ್ಮಿಕ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿರುವ ಕರೀಂ ಹಾಜಿಯವರು
ಎಸ್.ವೈ.ಎಸ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಕೋಶಾಧಿಕಾರಿಯೂ ಆಗಿದ್ದಾರೆ.
ದೀರ್ಘ ಕಾಲ ಸಯ್ಯಿದ್ ತಾಹಿರುಲ್ ಅಹ್ದಲ್ ತಂಙಳ್ ಅವರ ಬಳಿ ದರ್ಸ್ ವಿದ್ಯಾಭ್ಯಾಸ ಕೂಡಾ ಪಡೆದಿದ್ದಾರೆ.ಸನ್ಮಾನ ಸಮಾರಂಭದಲ್ಲಿ ಸಂಸ್ಥೆಯ ಸೌದಿ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಹಾಜಿ ಮುಹಮ್ಮದ್ ಫಾರೂಖ್ ಕನ್ಯಾನ, ಸೌದಿ ಸಮಿತಿಯ ಪ್ರತಿನಿಧಿಗಳಾದ ಹಾಜಿ ಅನ್ವರ್ ಹುಸೈನ್ ಗೂಡಿನಬಳಿ, ಹಾಜಿ ಮುಹಮ್ಮದ್ ಕುಕ್ಕುವಳ್ಳಿ , ಬಹರೈನ್ ಸಮಿತಿಯ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ, ಬಹರೈನ್ ಸಂಚಾಲಕ ಸಿದ್ದೀಖ್ ಮುಸ್ಲಿಯಾರ್ ಕಲ್ಕಟ್ಟ, ಮನ್ಸೂರ್ ಬೆಲ್ಮ ಉಪಸ್ಥಿತಿತರಿದ್ದರು.ಸಂಸ್ಥೆಯ ಉಪಾಧ್ಯಕ್ಷ ಹಾಜಿ ಕೆ.ಎಸ್.ಅಬೂಬಕರ್ ಸಅದಿ ಮಜೂರು ಸ್ವಾಗತಿಸಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಬಿಕೆ ರಶೀದ್ ಸಂಪ್ಯ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ