ನವದೆಹಲಿ: ಕೋವಿಡ್ -19 ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಮಾನವೀಯ ಸೇವೆ ಸಲ್ಲಿಸುವ ಬದಲು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ವಸತಿ ಕಾಲೋನಿಗಳಲ್ಲಿ 2-3 ಕೊಠಡಿಗಳ ಫ್ಲಾಟ್ ಗಳಿಂದ ನಡೆಯುತ್ತಿರುವ ನರ್ಸಿಂಗ್ ಹೋಮ್ ಗಳು ಅಗ್ನಿ ಮತ್ತು ಕಟ್ಟಡ ಸುರಕ್ಷತಾ ನಿಯಮಗಳು ಉಲ್ಲಂಘನೆಯಾಗದಂತೆ ಸ್ವಲ್ಪ ಗಮನ ಹರಿಸಬೇಕಾಗಿದೆ ಎಂದು ನಿರ್ದೇಶನ ನೀಡಿದೆ.
ಕಟ್ಟಡದ ಉಪ-ಕಾನೂನು ಉಲ್ಲಂಘನೆಯನ್ನು ಸರಿಪಡಿಸಲು ಆಸ್ಪತ್ರೆಗಳಿಗೆ ಮುಂದಿನ ವರ್ಷದ ಜುಲೈವರೆಗೂ ಗಡುವನ್ನು ವಿಸ್ತರಿಸಿರುವ ಗುಜರಾತ್ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕಟ್ಟಡಗಳಿಗೆ ಬೆಂಕಿ ಬಿದ್ದ ಘಟನೆಗಳಲ್ಲಿ ಜನರು ಸಾವನ್ನಪ್ಪುವುದು ಮುಂದುವರೆದಿದೆ. ಮಾನವ ದುರಂತದ ಸಂದರ್ಭದಲ್ಲಿ ಮಾನವೀಯ ಸೇವೆ ಸಲ್ಲಿಸುವ ಬದಲು ಈ ಆಸ್ಪತ್ರೆಗಳು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಹೇಳಿದೆ.
ಕಳೆದ ವರ್ಷದ ಆದೇಶದಂತೆ ಗುಜರಾತ್ ಸರ್ಕಾರ ಗಡುವು ವಿಸ್ತರಿಸಿಲ್ಲ, ಆಸ್ಪತ್ರೆಗಳು ತೊಂದರೆಯಲ್ಲಿರುವ ರೋಗಿಗಳಿಗೆ ಸಹಾಯವನ್ನು ಒದಗಿಸಲು ಉದ್ದೇಶಿಸಿವೆ ಆದರೆ ಅವು ಹಣದ ಗಣಿಗಾರಿಕೆ ಯಂತ್ರಗಳಾಗಿವೆ ಎಂದು ನ್ಯಾಯಮೂರ್ತಿಗಳಾದ ಡಿ. ವೈ. ಚಂದ್ರಚೂಡ್ ಮತ್ತು ಎಂ ಆರ್ ಶಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.
ಕೋವಿಡ್ ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಬೃಹತ್ ಉದ್ಯಮಗಳಾಗಿ ರೂಪುಗೊಂಡಿವೆ. ಈ ರೀತಿಯ ನರ್ಸಿಂಗ್ ಹೋಮ್ ಗಳು, ವಸತಿ ಕಾಲೋನಿಗಳಲ್ಲಿ ಎರಡ್ಮೂರು ಕೊಠಡಿಗಳ ಫ್ಲಾಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳು ಕೆಲಸ ನಿರ್ವಹಿಸಲು ಅವಕಾಶ ನೀಡಬಾರದು, ಈ ಆಸ್ಪತ್ರೆಗಳನ್ನು ಬಂದ್ ಮಾಡುವುದು ಒಳ್ಳೆಯದು ಮತ್ತು ರಾಜ್ಯ ಸರ್ಕಾರ ಅಗತ್ಯ ಮೂಲಸೌಕರ್ಯ ಒದಗಿಸಬೇಕೆಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ನಾಸಿಕ್, ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಸಂಭವಿಸಿದ ಬೆಂಕಿ ಘಟನೆಗಳನ್ನು ಉಲ್ಲೇಖಿಸಿದ ನ್ಯಾಯಪೀಠ, ಗುಜರಾತ್ ಸರ್ಕಾರ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಒಂದು ವಾರದೊಳಗೆ ಅಧಿಸೂಚನೆ ಕುರಿತು ವಿವರಣೆ ನೀಡಬೇಕೆಂದು ಕೋರಿದೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ