ನವದೆಹಲಿ: ಕೋವಿಡ್ -19 ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಮಾನವೀಯ ಸೇವೆ ಸಲ್ಲಿಸುವ ಬದಲು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ವಸತಿ ಕಾಲೋನಿಗಳಲ್ಲಿ 2-3 ಕೊಠಡಿಗಳ ಫ್ಲಾಟ್ ಗಳಿಂದ ನಡೆಯುತ್ತಿರುವ ನರ್ಸಿಂಗ್ ಹೋಮ್ ಗಳು ಅಗ್ನಿ ಮತ್ತು ಕಟ್ಟಡ ಸುರಕ್ಷತಾ ನಿಯಮಗಳು ಉಲ್ಲಂಘನೆಯಾಗದಂತೆ ಸ್ವಲ್ಪ ಗಮನ ಹರಿಸಬೇಕಾಗಿದೆ ಎಂದು ನಿರ್ದೇಶನ ನೀಡಿದೆ.
ಕಟ್ಟಡದ ಉಪ-ಕಾನೂನು ಉಲ್ಲಂಘನೆಯನ್ನು ಸರಿಪಡಿಸಲು ಆಸ್ಪತ್ರೆಗಳಿಗೆ ಮುಂದಿನ ವರ್ಷದ ಜುಲೈವರೆಗೂ ಗಡುವನ್ನು ವಿಸ್ತರಿಸಿರುವ ಗುಜರಾತ್ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕಟ್ಟಡಗಳಿಗೆ ಬೆಂಕಿ ಬಿದ್ದ ಘಟನೆಗಳಲ್ಲಿ ಜನರು ಸಾವನ್ನಪ್ಪುವುದು ಮುಂದುವರೆದಿದೆ. ಮಾನವ ದುರಂತದ ಸಂದರ್ಭದಲ್ಲಿ ಮಾನವೀಯ ಸೇವೆ ಸಲ್ಲಿಸುವ ಬದಲು ಈ ಆಸ್ಪತ್ರೆಗಳು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಹೇಳಿದೆ.
ಕಳೆದ ವರ್ಷದ ಆದೇಶದಂತೆ ಗುಜರಾತ್ ಸರ್ಕಾರ ಗಡುವು ವಿಸ್ತರಿಸಿಲ್ಲ, ಆಸ್ಪತ್ರೆಗಳು ತೊಂದರೆಯಲ್ಲಿರುವ ರೋಗಿಗಳಿಗೆ ಸಹಾಯವನ್ನು ಒದಗಿಸಲು ಉದ್ದೇಶಿಸಿವೆ ಆದರೆ ಅವು ಹಣದ ಗಣಿಗಾರಿಕೆ ಯಂತ್ರಗಳಾಗಿವೆ ಎಂದು ನ್ಯಾಯಮೂರ್ತಿಗಳಾದ ಡಿ. ವೈ. ಚಂದ್ರಚೂಡ್ ಮತ್ತು ಎಂ ಆರ್ ಶಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.
ಕೋವಿಡ್ ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಬೃಹತ್ ಉದ್ಯಮಗಳಾಗಿ ರೂಪುಗೊಂಡಿವೆ. ಈ ರೀತಿಯ ನರ್ಸಿಂಗ್ ಹೋಮ್ ಗಳು, ವಸತಿ ಕಾಲೋನಿಗಳಲ್ಲಿ ಎರಡ್ಮೂರು ಕೊಠಡಿಗಳ ಫ್ಲಾಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವುಗಳು ಕೆಲಸ ನಿರ್ವಹಿಸಲು ಅವಕಾಶ ನೀಡಬಾರದು, ಈ ಆಸ್ಪತ್ರೆಗಳನ್ನು ಬಂದ್ ಮಾಡುವುದು ಒಳ್ಳೆಯದು ಮತ್ತು ರಾಜ್ಯ ಸರ್ಕಾರ ಅಗತ್ಯ ಮೂಲಸೌಕರ್ಯ ಒದಗಿಸಬೇಕೆಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ನಾಸಿಕ್, ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಸಂಭವಿಸಿದ ಬೆಂಕಿ ಘಟನೆಗಳನ್ನು ಉಲ್ಲೇಖಿಸಿದ ನ್ಯಾಯಪೀಠ, ಗುಜರಾತ್ ಸರ್ಕಾರ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಒಂದು ವಾರದೊಳಗೆ ಅಧಿಸೂಚನೆ ಕುರಿತು ವಿವರಣೆ ನೀಡಬೇಕೆಂದು ಕೋರಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ