ಕೊವಿಡ್ ನಿರ್ಬಂಧಗಳ ಮಧ್ಯೆ, ತ್ಯಾಗ ಬಲಿದಾನದ ಹಬ್ಬವಾದ ಈದುಲ್ ಅದ್ಹಾ ಅಥವಾ ಬಕ್ರೀದ್ ನ್ನು ಗಲ್ಫ್ ರಾಷ್ಟ್ರಗಳಲ್ಲಿ ಇಂದು ಆಚರಿಸಲಾಗುತ್ತಿದೆ.ಅನಿವಾಸಿ ಭಾರತೀಯರು ಈದ್ ಆಚರಣೆಗೆ ಸಜ್ಜಾಗಿದ್ದಾರೆ.
ಪ್ರವಾದಿ ಇಬ್ರಾಹಿಂ (ಅ.ಸ) ಮತ್ತು ಅವರ ಸುಪುತ್ರ ಇಸ್ಮಾಯಿಲ್ (ಅ. ಸ) ಅವರ ತ್ಯಾಗದ ಸ್ಮರಣೆಯಾಗಿದೆ ಈದುಲ್ ಅದ್’ಹಾ. ಕೋವಿಡ್ ನಿರ್ಬಂಧದೊಂದಿಗೆ ಈ ವರ್ಷ ಸೌದಿ ಅರೇಬಿಯಾ, ಯುಎಇ, ಕುವೈತ್ ಮತ್ತು ಕತಾರ್ನ ಈದ್ಗಾ ಮತ್ತು ಮಸೀದಿಗಳಲ್ಲಿ ಈದ್ ಪ್ರಾರ್ಥನೆ ನಡೆಯಲಿದೆ.
ಆದಾಗ್ಯೂ, ಒಮಾನ್ನಲ್ಲಿ ಹಬ್ಬಕ್ಕೆ ಪೂರ್ಣ ಲಾಕ್ಡೌನ್ ಪ್ರಾರಂಭವಾಗುತ್ತದೆ. ಮನೆಯಲ್ಲಿ ಈದ್ ಪ್ರಾರ್ಥನೆ ಮಾಡಬೇಕೆಂದು ಸೂಚಿಸಲಾಗಿದೆ.ಬಹ್ರೇನ್ನಲ್ಲಿ, ಗ್ರ್ಯಾಂಡ್ ಮಸೀದಿಯಲ್ಲಿ 30 ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಯುಎಇಯಲ್ಲಿ ಈದ್ ಪ್ರಾರ್ಥನೆ ಮತ್ತು ಕುತುಬಾ 15 ನಿಮಿಷಕ್ಕೆ ಸೀಮಿತಗೊಳಿಸಲಾಗಿದೆ. ಪ್ರಾರ್ಥನೆಗೆ 15 ನಿಮಿಷಗಳ ಮೊದಲು ಈದ್ಗಾ ಮತ್ತು ಮಸೀದಿಗಳು ತೆರೆಯಲಾಗುವುದು. ಪ್ರಾರ್ಥನೆಯ ಬಳಿಕ ತಕ್ಷಣ ಮುಚ್ಚಲಾಗುವುದು.
ಹಬ್ಬಕ್ಕೆ ಸಂಬಂಧಿಸಿದಂತೆ ವಿವಿಧ ಕೊಲ್ಲಿ ರಾಷ್ಟ್ರಗಳಲ್ಲಿ ಒಂದು ವಾರದ ರಜೆಯನ್ನು ಘೋಷಿಸಲಾಗಿದೆ. ಪ್ರತಿ ರಜಾದಿನಗಳ ನಂತರ ಕೋವಿಡ್ ಪ್ರಕರಣ ಮತ್ತು ಮರಣಗಳು ಹೆಚ್ಚುತ್ತಿವೆ ಎಂಬ ಅಧ್ಯಯನದ ಆಧಾರದ ಮೇಲೆ ಈದ್ ಆಚರಣೆಗಳು ಹೆಚ್ಚಿನ ಎಚ್ಚರಿಕೆಯಿಂದ ನಡೆಯಲಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ