ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಎಕ್ಸಾಂ ಮಾಡುವಂತೆ ಮನವಿ ಮಾಡಿದ್ರು. ಆದರೆ, ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಯಾವೊಬ್ಬ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ಫಲಿತಾಂಶ ನೀಡಲಾಗಿದೆ ಎಂದು ಹೇಳಿದ್ದಾರೆ. SSLC+1st PUC+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಅದರಂತೆ, 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಆಗಿದ್ದಾರೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡದ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ದಾರೆ. ದ್ವಿತೀಯ ಪಿಯು ಫಲಿತಾಂಶದಲ್ಲಿ ಬೆಂಗಳೂರು ದಕ್ಷಿಣ ಎರಡನೇ ಸ್ಥಾನ ಗಳಿಸಿದೆ. ಬೆಂಗಳೂರು ದಕ್ಷಿಣದ 302 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಲಭಿಸಿದೆ. 2ನೇ ಪಿಯು ಫಲಿತಾಂಶದಲ್ಲಿ ಬೆಂಗಳೂರು ಉತ್ತರ 3ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರದ 261 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ದ್ವಿತೀಯ ಪಿಯು ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ 4ನೇ ಸ್ಥಾನ ಲಭ್ಯವಾಗಿದೆ. ಉಡುಪಿ ಜಿಲ್ಲೆಯ 149 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ಸಿಕ್ಕಿದೆ. ಸೆಕೆಂಡ್ ಪಿಯು ಫಲಿತಾಂಶದಲ್ಲಿ ಹಾಸನ ಜಿಲ್ಲೆ 5ನೇ ಸ್ಥಾನ ಗಳಿಸಿದೆ. ಹಾಸನ ಜಿಲ್ಲೆಯ 104 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕ ದೊರೆತಿದೆ.
ಟಾಪ್ 5 ಜಿಲ್ಲೆಗಳ ಪಟ್ಟಿ ಹೀಗಿದೆ:
ದಕ್ಷಿಣ ಕನ್ನಡ (445 ವಿದ್ಯಾರ್ಥಿಗಳು 600ಕ್ಕೆ 600 ಅಂಕ)
ಬೆಂಗಳೂರು ದಕ್ಷಿಣ (302 ವಿದ್ಯಾರ್ಥಿಗಳು 600ಕ್ಕೆ 600)
ಬೆಂಗಳೂರು ಉತ್ತರ (261 ವಿದ್ಯಾರ್ಥಿಗಳು 600ಕ್ಕೆ 600 ಅಂಕ)
ಉಡುಪಿ (149 ವಿದ್ಯಾರ್ಥಿಗಳು 600ಕ್ಕೆ 600 ಅಂಕ)
ಹಾಸನ (104 ವಿದ್ಯಾರ್ಥಿಗಳು 600ಕ್ಕೆ 600 ಅಂಕ)
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ