ಪುತ್ತೂರು-ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಹರೈನ್ ರಾಷ್ಟ್ರೀಯ ಸಮಿತಿಯ ನಾಯಕರಿಗೆ ಸಂಸ್ಥೆಯ ಸಭಾಂಗಣದಲ್ಲಿ ವಿಜೃಂಭಣೆಯ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು.


ಬಹರೈನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ, ಸಹಕಾರ್ಯದರ್ಶಿ ಮನ್ಸೂರ್ ಸಲ್ಮಾಬಾದ್ ಬೆಳ್ಮ,ಆರ್ಗನೈಝರ್ ಸಿದ್ದೀಖ್ ಮುಸ್ಲಿಯಾರ್ ಕಲ್ಕಟ್ಟ ಅವರನ್ನು ಮೆಮೆಂಟೋ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಹರೈನ್ ಸಮಿತಿಯ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಂಸ್ಥೆಯ ಆಡಳಿತ ಸೌಧದ ಕಾಮಗಾರಿಯನ್ನು ವೀಕ್ಷಿಸಿ ನಾಯಕರು ಸಂತೃಪ್ತಿ ಸೂಚಿಸಿದರು .
ಅಭಿನಂದನಾ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ಮದನಿ ಹಾದಿ ತಂಙಳ್ ಅಧ್ಯಕ್ಷತೆ ವಹಿಸಿದರು.
ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ. ಝೈನೀ ಕಾಮಿಲ್ ಸಂಸ್ಥೆಯ ಪರಿಚಯ ಮಾಡಿದರು. ಮರ್ಕಝುಲ್ ಹುದಾ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹಾಜಿ ಮುಹಮ್ಮದ್ ಫಾರೂಖ್ ಕನ್ಯಾನ, ಜುಬೈಲ್ ಅಭಿನಂದನಾ ಭಾಷಣ ಮಾಡಿದರು. ಸಂಸ್ಥೆಯ
ಉಪಾಧ್ಯಕ್ಷ ಹಾಜಿ ಕೆ.ಎಸ್.ಅಬೂಬಕರ್ ಸಅದಿ ಮಜೂರು,ಕೋಶಾಧಿಕಾರಿ ಹಾಜಿ ಅಬ್ದುಲ್ ಕರೀಂ ಚೆನ್ನಾರ್, ನಾಯಕರಾದ ಹಾಜಿ ಮುಹಮ್ಮದ್ ಕುಕ್ಕುವಳ್ಳಿ, ಆಡಿಟರ್ ಹಾಜಿ ಜಿ.ಎಂ.ಅನ್ವರ್ ಹುಸೈನ್ ಗೂಡಿನಬಳಿ, ಶರೀಅತ್ ಕಾಲೇಜ್ ಜೋಯಿಂಟ್ ಡೈರೆಕ್ಟರ್ ಅಬ್ದುಲ್ ಜಲೀಲ್ ಸಖಾಫಿ ಜಾಲ್ಸೂರು,ಸದಸ್ಯ ಇಖ್ಬಾಲ್ ಬಪ್ಪಳಿಗೆ ಮುಂತಾದವರು ಶುಭ ಹಾರೈಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮರ್ಕಝ್ ಬಹರೈನ್ ಸಮಿತಿ ಪ್ರಧಾನ ಕಾರ್ಯದರ್ಶಿ ಖಲಂದರ್ ಶರೀಫ್ ಕಕ್ಕೆಪದವು ಅವರ ಷಡ್ಡಕ, ಇತ್ತೀಚೆಗೆ ಬಹರೈನ್ ನಲ್ಲಿ ನಿಧನರಾದ ಅಬ್ದುಲ್ ರಹ್ಮಾನ್ ನಂದಾವರ ಅವರ ಹೆಸರಲ್ಲಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.
ಆಡಳಿತಾಧಿಕಾರಿ ಬಿಕೆ ರಶೀದ್ ಸಂಪ್ಯ ಸ್ವಾಗತಿಸಿ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ