ಮಂಜನಾಡಿ:ಯುಎಇಯಲ್ಲಿ ಕಾರ್ಯಾಚರಿಸಿ, ಇದೀಗ ಕೆಲಸ ತೊರೆದು ಊರಿನಲ್ಲಿರುವ ಹಾಗೂ ಲಾಕ್ ಡೌನಾಗಿ ಊರಿನಲ್ಲಿ ಸಿಲುಕಿರುವ ಕೆಸಿಎಫ್ ನ ಕಾರ್ಯಕರ್ತರ ಸ್ನೇಹ ಸಮ್ಮಿಲನವು ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿಯಲ್ಲಿ ಜುಲೈ 23 ಶುಕ್ರವಾರ ನಡೆಯಿತು.

ಕಳೆದ ಎಂಟು ವರ್ಷಗಳಿಂದ ಕೊಲ್ಲಿ ಹಾಗೂ ಲಂಡನ್ ಮಲೇಶಿಯಾದಲ್ಲಿ ಕಾರ್ಯಾಚರಿಸುತ್ತಿರುವ ಅನಿವಾಸಿ ಕನ್ನಡಿಗರ ಸಂಘಟನೆಯಾಗಿದೆ ಕೆಸಿಎಫ್.
ಕಾರ್ಯಕ್ರಮ ಮರ್ಹೂಮ್ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರ ಖಬರ್ ಝಿಯಾರತಿನೊಂದಿಗೆ ಆರಂಭಗೊಂಡಿತು. ಅಲ್ ಮದೀನಾ ಸಂಸ್ಥೆಯ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ರವರು ಝಿಯಾರತಿಗೆ ನೇತೃತ್ವ ನೀಡಿದರು, ಕಾರ್ಯಕ್ರಮದಲ್ಲಿ ಕೆಸಿಎಫ್ ದುಬೈ ನಾರ್ತ್ ಮಾಜಿ ಅಧ್ಯಕ್ಷರಾದ ಅಬ್ದುಲ್ಲ ಉಸ್ತಾದ್ ಕುಡ್ತಮುಗೇರು ರವರು ದುಆ ನೆರವರಿಸಿದರು.

ಅಧ್ಯಕ್ಸತೆಯನ್ನು ಕೆಸಿಎಫ್ ಯುಎಇ ರಾಷ್ಟ್ರಿಯ ಸಮಿತಿ ಕೋಶಾಧಿಕಾರಿ ಇಬ್ರಾಹಿಂ ಬ್ರೆಟ್ ಮಾರ್ಬ್ಬಲ್ ರವರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಶೇಖ್ ಭಾವ ಹಾಜಿ ಮಂಗಳೂರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೆಸಿಎಫ್ ದುಬೈ ಮಾಜಿ ಅಧ್ಯಕ್ಷರಾದ ಮೆಹಬೂಬ್ ರಹ್ಮಾನ್ ಸಖಾಫಿ ಕಿನ್ಯ ರವರು ಮುಖ್ಯ ಭಾಷಣ ಮಾಡಿದರು ಕಾರ್ಯಕ್ರಮದಲ್ಲಿ ಅಲ್ ಮದೀನಾ ಸಂಸ್ಥೆಯ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ,ಕೆಸಿಎಫ್ ಯುಎಇ ರಾಷ್ಟ್ರಿಯ ಸಮಿತಿ ಇಹ್ಶಾನ್ ವಿಭಾಗ ಅಧ್ಯಕ್ಸರಾದ ಅಬ್ದುಲ್ ಖಾದರ್ ಸಅದಿ ಸುಳ್ಯ ,ಹುಸೈನ್ ಹಾಜಿ ಕಿನ್ಯ ,ಇಬ್ರಾಹಿಂ ಹಾಜಿ ಕೊಲ್ನಾಡು ,ನಝಿರ್ ಹಾಜಿ ಕೆಮ್ಮಾರ,ಇಬ್ರಾಹಿಂ ಹಾಜಿ ಕಿನ್ಯ ಶುಭಹಾರೈಸಿದರು.
ಅಬೂಸ್ವಾಲಿಹ್ ಸಖಾಫಿ ಶಾರ್ಜ,ಇಸ್ಮಾಯಿಲ್ ಮದನಿ ನಗರ,ಅಕ್ರಂ ಬಿಸಿರೋಡು,ಹನೀಫ್ ಬಸರಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು . ಕೆಸಿಎಫ್ ಯುಎಇ ರಾಷ್ಟ್ರಿರ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಖಲಂದರ್ ಕಬಕ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮವು ಮರ್ಹೂಂ ಶೈಖುನಾ ತಾಜುಲ್ ಪುಕಹಾ ಬೇಕಲ್ ಉಸ್ತಾದರ ಖಬರ್ ಝಿಯಾರತಿನೊಂದಿಗೆ ಕೊನೆಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ