ಮಂಗಳೂರು,ಜು.31: ನೆರೆಯ ಕಾಸರಗೋಡಿನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರಕಾರಿ ಹಾಗೂ ಖಾಸಗಿ ಬಸ್ಗಳನ್ನು ಆ.1ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆ.1ರಿಂದ 10 ದಿನದ ಕಾಲ ಕಾಸರಗೋಡು ಬಸ್ ಸಂಚಾರ ಸ್ಥಗಿತಗೊಳಿಸಲಾಗುತ್ತದೆ, ಕರ್ನಾಟಕ ಪ್ರವೇಶಿಸುವ ಕೇರಳ ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಕಡ್ಡಾಯವಾಗಿದ್ದು ಅವರು ಹಾಸ್ಟೆಲ್ನಲ್ಲಿ ಒಂದು ವಾರ ಹೋಂ ಕ್ವಾರಂಟೈನ್’ಗೆ ಒಳಪಡಬೇಕಾಗಿದೆ. ಸೋಂಕಿತರಿಗೆ ಕಡ್ಡಾಯವಾಗಿ ಕೋವಿಡ್ ಸೆಂಟರ್ನಲ್ಲಿ ದಾಖಲಿಸಬೇಕು, ಅನಗತ್ಯವಾಗಿ ಸೋಂಕಿತರು ಹೊರಗೆ ತಿರುಗಾಡುವುದು ಕಂಡುಬಂದಲ್ಲಿ ಎಫ್ಐಆರ್ ದಾಖಲಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ನಿಯಮ ಮತ್ತಷ್ಟು ಬಿಗಿಗೊಳಿಸಲಾಗಿದ್ದು,1 ಕುಟುಂಬದಲ್ಲಿ ಇಬ್ಬರು ಸೋಂಕಿತರಿದ್ದರೆ ಮೈಕ್ರೋ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗುವುದು, ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವಂತಹ ಸಾರ್ವಜನಿಕರ ಮೇಲೆ ದಂಡ ವಿಧಿಸಬೇಕು, ಆ.10ರ ತನಕ ಸಭೆ, ಸಮಾರಂಭ ನಡೆಸುವಂತಿಲ್ಲ, ಮದುವೆಗೆ 50 ಜನ ಮಾತ್ರ ಸೀಮಿತ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದಲ್ಲಿ ಕಲ್ಯಾಣ ಮಂಟಪಗಳ ಮಾಲಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ತಿಳಿಸಿದರು.
ಕೋವಿಡ್ ಸೋಂಕಿತರು ಹೋಂ ಕ್ವಾರಂಟೈನ್ನಲ್ಲಿ ಇರುವ ಬಗ್ಗೆ ಸಂಬಂಧಿಸಿದ ತಹಶೀಲ್ದಾರ್ಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಬೇಕು. ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವಂತಹ ಸ್ಥಳಗಳಲ್ಲಿ ಜನಸಂದಣಿ ಕಂಡುಬರುತ್ತಿದ್ದೂ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ.60 ಆನ್ಲೈನ್ ನೋಂದಣಿ ಮತ್ತು ಶೇ.40 ನೇರವಾಗಿ ಹಾಗೂ 18 ವರ್ಷ ಮೇಲ್ಟಟ್ಟವರಿಗೆ ಶೇ.80 ಆನ್ಲೈನ್ ನೋಂದಣಿ ಮತ್ತು ಶೇ.20 ನೇರವಾಗಿ ಲಸಿಕೆಯನ್ನು ನೀಡಬೇಕು ಎಂದು ತಿಳಿಸಿದರು
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ