janadhvani

Kannada Online News Paper

ಆ 15ರಂದು ಕೆಸಿಎಫ್ ನಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮುಖ್ಯ ಅತಿಥಿ

ಭಾರತ ದೇಶದ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಬಹಳ ಅದ್ದೂರಿಯಾಗಿ ನಡೆಸಲು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ತೀರ್ಮಾನಿಸಲಾಗಿದೆ.

ಇದರಂತೆ ಆಗಸ್ಟ್ 15ರಂದು ಭಾರತ ಸಮಯ ರಾತ್ರಿ 10.00 ಗಂಟೆಗೆ ಸರಿಯಾಗಿ ಝೂಮ್ ಅಪ್ಲಿಕೇಶನ್ ಮೂಲಕ Virtual Convention ಕಾರ್ಯಕ್ರಮ ನಡೆಯಲಿದೆ.

ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೇಖ್ ಬಾವ ಮಂಗಳೂರು ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರಕಾರದ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ರವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಬಯಸುವವರಿಗೆ ಪ್ರತ್ಯೇಕ ನೊಂದಾವಣೆ ಪೋರ್ಟಲ್ ತಯಾರಿಸಲಾಗಿದ್ದು, ಭಾಗಿಯಾಗುವವರು https://forms.gle/5KpNp5ARTCiiNQf88 ಈ ಪೋರ್ಟಲ್ ನಲ್ಲಿ ನೊಂದಾವಣೆ ಮಾಡುವಂತೆ ಅಂತರಾಷ್ಟ್ರೀಯ ಸಮಿತಿ ತಿಳಿಸಲಾಗಿದೆ.

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮುಖ್ಯವಾಗಿ ನಡೆಯಲಿರುವ ಈ ಕಾರ್ಯಕ್ರಮವಲ್ಲದೇ ಕೆಸಿಎಫ್ ಸದಸ್ಯ ರಾಷ್ಟ್ರಗಳಲ್ಲಿ “ನನ್ನ ಕನಸಿನ ಭಾರತ” ಎಂಬ ವಿಷಯವಾಗಿ ಪ್ರಬಂಧ ಸ್ಪರ್ಧೆ, ರಕ್ತದಾನ ಶಿಬಿರ, ಮಕ್ಕಳಿಗೆ ಚಿತ್ರ ರಚನೆ ಸ್ಪರ್ಧೆಗಳನ್ನೂ ಏರ್ಪಡಿಸಲಾಗುತ್ತದೆ ಎಂದು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾಬ್ ಖಮರುದ್ದೀನ್ ಗೂಡಿನಬಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.