ಭಾರತದಿಂದ ಯುಎಇಗೆ ಹೊರಡುವ ಪ್ರಯಾಣಿಕರು ಕನಿಷ್ಠ 6 ಗಂಟೆಗಳ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ವರದಿ ಮಾಡಬೇಕು ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ತಿಳಿಸಿದೆ.
ರಾಪಿಡ್ ಪಿಸಿಆರ್ ಪರೀಕ್ಷೆ ನಿಮಿತ್ತ ಪ್ರಯಾಣಿಕರು ಬೇಗನೆ ಬರಬೇಕು. ವಿಮಾನ ಹೊರಡುವ 4 ಗಂಟೆಗಳ ಮೊದಲು ತಪಾಸಣೆ ಆರಂಭವಾಗಲಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಹೇಳಿದೆ.
48 ಗಂಟೆಗಳ ಪಿಸಿಆರ್ ಫಲಿತಾಂಶದ ಜೊತೆಗೆ, ಯುಎಇಗೆ ವಾಪಸಾತಿಗೆ ನಾಲ್ಕು ಗಂಟೆಗಳ ಒಳಗಿನ ರಾಪಿಡ್ ಪಿಸಿಆರ್ ಪರೀಕ್ಷಾ ಫಲಿತಾಂಶವೂ ಕಡ್ಡಾಯವಾಗಿದೆ.ರಾಪಿಡ್ ಪಿಸಿಆರ್ ತಪಾಸಣೆಯನ್ನು ಸಕಾಲದಲ್ಲಿ ಪೂರ್ಣಗೊಳಿಸಲು ನಿರ್ಗಮನಕ್ಕೆ ಕನಿಷ್ಠ ಆರು ಗಂಟೆಗಳ ಮೊದಲು ವಿಮಾನ ನಿಲ್ದಾಣಕ್ಕೆ ಬರಲು ಸೂಚಿಸಲಾಗಿದೆ.
ನಿರ್ಗಮನಕ್ಕೆ ನಾಲ್ಕು ಗಂಟೆಗಳ ಮೊದಲು ರಾಪಿಡ್ ಟೆಸ್ಟ್ ಆರಂಭವಾಗುತ್ತದೆ. ನಿರ್ಗಮನಕ್ಕೆ ಎರಡು ಗಂಟೆಗಳ ಮೊದಲು ರಾಪಿಡ್ ಟೆಸ್ಟ್ ಕೇಂದ್ರಗಳನ್ನು ಮುಚ್ಚಲಾಗುವುದು ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.
ಅಬುಧಾಬಿಯಲ್ಲಿ ಇಳಿಯುವವರು 12 ದಿನಗಳ ಕ್ವಾರಂಟೈನ್ ಹೊಂದಿರುತ್ತಾರೆ. ಅಧಿಕಾರಿಗಳು ಹೋಮ್ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಅನ್ನು ಸೂಚಿಸಬಹುದು. ಅಬುಧಾಬಿಗೆ ಆಗಮಿಸುವವರು ಆರನೇ ಮತ್ತು ಹನ್ನೊಂದನೇ ದಿನದಂದು ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು.
ರಾಸ್ ಅಲ್ ಖೈಮಾಕ್ಕೆ ಆಗಮಿಸುವವರು ಹತ್ತು ದಿನಗಳ ಹೋಮ್ ಕ್ವಾರಂಟೈನ್ ಹೊಂದಿರುತ್ತಾರೆ. ಪಿಸಿಆರ್ ಪರೀಕ್ಷೆಯನ್ನು ನಾಲ್ಕನೇ ಮತ್ತು ಎಂಟನೇ ದಿನದಂದು ನಡೆಸಬೇಕು. ಎರಡೂ ವಿಮಾನ ನಿಲ್ದಾಣಗಳಲ್ಲಿ ಕೈಗೆ ಟ್ರ್ಯಾಕಿಂಗ್ ವಾಚ್ ಧರಿಸಲಾಗುತ್ತದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ತಿಳಿಸಿದೆ.
ಶಾರ್ಜಾ ಮತ್ತು ದುಬೈನಲ್ಲಿ ಇಳಿಯುವವರಿಗೆ,ವಿಮಾನ ನಿಲ್ದಾಣದಲ್ಲಿನ ಪಿಸಿಆರ್ ಪರೀಕ್ಷೆಯ ಫಲಿತಾಂಶದವರೆಗೆ ಅಥವಾ 24 ಗಂಟೆಗಳ ಕ್ವಾರಂಟೈನ್ ಇರಲಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ