ಬೆಂಗಳೂರು,ಆ.14: ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಬೊಮ್ಮಾಯಿ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು. 9ರಿಂದ 12ನೇ ತರಗತಿ ವರೆಗೆ ಆ.23ರಿಂದ ಪ್ರಾರಂಭವಾಗಲಿವೆ.
ಇಂದು (ಆ.14) ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೋನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭಿಸಲಾಗುವುದು. ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾರಂಭ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಒಂದು ವಾರ ಶಾಲೆಯನ್ನು ಮುಚ್ಚುವ ಜೊತೆಗೆ ಸ್ಯಾನಿಟೈಸ್ ಮಾಡಿ ವಾರದ ನಂತರ ಶಾಲೆ ಆರಂಭಿಸಲಾಗುವುದು. ಜಿಲ್ಲಾವಾರು ಪಾಸಿಟಿವಿಟಿ ದರ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಪೋಷಕರು, ಶಾಲೆಯ ಶಿಕ್ಷಕ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಸೆಪ್ಟೆಂಬರ್ 23 ರಂದು 9 ರಿಂದ 12 ನೇ ತರಗತಿವರೆಗೆ ಶಾಲೆ ತೆರೆಯಲು ಎಸ್ಓಪಿ ತಯಾರಿಸಲಾಗಿದೆ. ಸದ್ಯದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಹಿತಿ ನೀಡಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ