ಆಗಸ್ಟ್ 15… ಭಾರತದ ಪಾಲಿಗೆ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ದಿನ. ಕಲೆ, ಸಾಹಿತ್ಯ, ಸಂಸ್ಕೃತಿಯಿಂದ ಶ್ರೀಮಂತವಾಗಿದ್ದ ನಮ್ಮ ದೇಶ ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಮುಕ್ತವಾಗಿ ಹೊಸ ರೂಪ ಪಡೆದ ಸುದಿನ ಇದು. ಇಂದು ನಾವೆಲ್ಲರೂ ಈ ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ ನಿಜ. ಆದರೆ, ಇದು ಅತ್ಯಂತ ಸುಲಭವಾಗಿ ಸಿಕ್ಕಿರುವ ಸ್ವಾತಂತ್ರ್ಯ ಖಂಡಿತಾ ಅಲ್ಲ. ಅದೆಷ್ಟೋ ದೇಶಭಕ್ತರು ತಮ್ಮ ರಕ್ತವನ್ನೇ ಬೆವರಂತೆ ಬಸಿದು ತಂದುಕೊಟ್ಟ ಸ್ವಾತಂತ್ರ್ಯ ಇದು. ತಮ್ಮ ಈ ಹೋರಾಟದ ಹಾದಿಯಲ್ಲಿ ಅದೆಷ್ಟೋ ಕೆಚ್ಚೆದೆಯ ವೀರರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದರು. ಅನುದಿನವೂ ಅನುಕ್ಷಣವೂ ದೇಶದ ಬಗ್ಗೆಯೇ ಚಿಂತಿಸುತ್ತಿದ್ದ ಈ ಸಮರ ಸೇನಾನಿಗಳ ತ್ಯಾಗದ ಫಲವೇ ಇಂದಿನ ಸ್ವಾತಂತ್ರ್ಯ.
ಯಾವ ಭಾರತೀಯನೂ ಮರೆಯಲು ಸಾಧ್ಯವೇ ಇಲ್ಲದ ದಿನ ಇದು. ಸ್ವಾತಂತ್ರ್ಯ ಸಂಗ್ರಾಮದ ಒಂದೊಂದು ಕತೆಗಳನ್ನು ಕೇಳಿದಾಗಲೂ, ಒಂದೊಂದು ಕ್ಷಣವನ್ನು ನೆನಪಿಸಿಕೊಳ್ಳುವಾಗಲೂ ದೇಶ ಪ್ರೇಮದ ಕಿಚ್ಚು ನಮ್ಮಲ್ಲಿ ಅಧಿಕವಾಗುತ್ತಲೇ ಸಾಗುತ್ತದೆ. ಇದೇ ಕಾರಣಕ್ಕೆ ಆಗಸ್ಟ್ 15 ಎಂದರೆ ಎಲ್ಲರ ಬದುಕಿನಲ್ಲೂ ತನ್ನದೇ ಆದ ಮಹತ್ವದ ಸ್ಥಾನ ಪಡೆದಿದೆ.
ನಮ್ಮ ದೇಶಕ್ಕಾಗಿ ಜೀವ ತೆತ್ತ ಅದೆಷ್ಟೋ ಕೆಚ್ಚೆದೆಯ ವೀರರ ತ್ಯಾಗ ಬಲಿದಾನವನ್ನು ವ್ಯರ್ಥವಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ನಮ್ಮ ದೇಶವನ್ನು ಕಟ್ಟಲು ಶ್ರಮಿಸಿದ ಪ್ರತಿಯೊಬ್ಬರು ಹಾಕಿಕೊಟ್ಟ ದೇಶಪ್ರೇಮ, ಪ್ರಾಮಾಣಿಕತೆಯ ಹಾದಿಯಲ್ಲಿ ಮುನ್ನಡೆಯುವುದು ಕೂಡಾ ಬಲು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಾವು ಹೆಜ್ಜೆ ಇಡೋಣ.
ಸರ್ವರಿಗೂ 75ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ