ಚಿಕ್ಕಮಗಳೂರು ಜಾಮಿಯಾ ಕಂಜುಲ್ ಇಮಾನ್
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಪ್ರತಷ್ಠಿತ ಸುನ್ನಿ ಸಂಸ್ಥೆಯಾದ ಜಾಮಿಯಾ ಕಂಜೂಲ್ ಇಮಾನ್ ನಲ್ಲಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಮೊಹಮ್ಮದ್ ಶಾಹಿದ್ ರಜ್ವೀ ರವರು ಧ್ವಾರೋಹಣವನ್ನು ನೆರವೇರಿಸಿದರು ಮತ್ತು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಜಿ ಫೈರೋಜ್ ಅಹಮದ್ ರಜ್ವಿ ರವರು ರಾಷ್ಟ್ರಗೀತೆ ಹಾಡುವ ಮೂಲಕ ನೆರೆದಿದ್ದ ವಿವಿಧ ಸುನ್ನಿ ಸಂಘಟನೆಗಳ ಮುಖಂಡರು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು ನಂತರ ಡಾಕ್ಟರ್ ಅಲ್ಲಮ ಇಕ್ಬಾಲ್ ರವರ ಸಾರೆ ಜಹಾನ್ ಸೆ ಅಚ್ಚ ಗೀತೆಯನ್ನು ಹಾಡಿದರು.
ಕೋರೋನ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಿ ನೆರೆದಿದ್ದ ಎಲ್ಲಾ ಸಾರ್ವಜನಿಕರಿಗೆ ಸಿಹಿಯನ್ನು ಹಂಚಲಾಯಿತು ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾತ್ ಮುಖಂಡರಾದ ಆರಿಫ್ ಅಲಿ ಖಾನ್, ಇತರೆ ಸಂಘಟನೆಗಳ ಮುಖಂಡರಾದ ಅಖ್ತರ್ ಹುಸೈನ್ ರಜ್ವಿ , ಫಾರೂಕ್ ಅಹಮದ್ ,ರಜ್ವಿ ಸೈಯದ್ ಮಜಹಾರ್ ಹುಸೈನ್ ಹಾಗು, ಇನ್ನಿತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು ಎಂದು ಪ್ರಧಾನ ಕಾರ್ಯದರ್ಶಿ ಹಾಜಿ ಫೈರೋಜ್ ಅಹಮದ್ ರಜ್ವಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಚಿಕ್ಕಮಗಳೂರು ಸಲಾಂ ಮಸೀದಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ
ಚಿಕ್ಕಮಗಳೂರು: ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಿಗೆ ಸನ್ಮಾನ
ಚಿಕ್ಕಮಗಳೂರು: ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ ಸಮಾರಂಭ
ಚಿಕ್ಕಮಗಳೂರು ಜಿಲ್ಲಾ ವಕ್ಫ್ ಮಂಡಳಿ- ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ
ಪ್ರವಾದಿ ನಿಂದನೆ- ತಪ್ಪಿತಸ್ಥರ ಶೀಘ್ರ ಬಂಧನಕ್ಕೆ ಚಿಕ್ಕಮಗಳೂರು ಮುಸ್ಲಿಂ ಜಮಾಅತ್ ಒತ್ತಾಯ
ಬಜರಂಗದಳ ಪುಂಡಾಟಿಕೆ : ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ
ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಗಣರಾಜ್ಯೋತ್ಸವ
ಚಿಕ್ಕಮಗಳೂರು ನಗರ ಸಭೆ ಚುನಾವಣೆ: ಮೊದಲ ಹಂತದ SDPI ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಜಾಮಿಯಾ ಕಂಝುಲ್ ಇಮಾನ್ ಚಿಕ್ಕಮಗಳೂರು: ಗಣರಾಜ್ಯೋತ್ಸವ ಆಚರಣೆ
ರಾಜ್ಯದ ಮುಸ್ಲಿಮರ ರಾಜಕೀಯ ಅವಸ್ಥೆ ಶೋಚನೀಯವಾಗಿದೆ- ಶಾಫಿ ಸಅದಿ