ಕಿನ್ಯಾ :ಭಾರತದ ಸ್ವಾತಂತ್ರ್ಯೊತ್ಸವದ ಅಮೃತ ವರ್ಷಾಚರಣೆಯ ಪ್ರಯುಕ್ತ ಪ್ರಜಾ ಭಾರತ ಉಳಿಯಲಿ ಎಂಬ ಧ್ಯೇಯ ವಾಕ್ಯದೊಂದಿಗೆ SSF ಕಿನ್ಯಾ ಸೆಕ್ಟರ್ ಹಾಗೂ SSF ಬೆಳರಿಂಗೆ ಯುನಿಟ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ಆಝಾದಿ ಸಪ್ತಾಹ ಕಾರ್ಯಕ್ರಮವು SSF ಬೆಳರಿಂಗೆ ಶಾಖಾಧ್ಯಕ್ಷರಾದ ಹಾರಿಸ್ ಸಖಾಫಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ನಾಯಕರಾದ ಕೆ.ಎಚ್. ಇಸ್ಮಾಯಿಲ್ ಸಅದಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಉಧ್ಘಾಟನಾ ಭಾಷಣದಲ್ಲಿ ಹನೀಫ್ ಸಖಾಫಿ ಕುತುಬಿ ನಗರ ರವರು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ಸೆಕ್ಟರ್ ಅಧ್ಯಕ್ಷರಾದ ನೌಫಲ್ ಅಹ್ಸನಿ ಹಾಗೂ ಕಿನ್ಯ ಗ್ರಾಮ ಪಂಚಾಯತ್ ಸದಸ್ಯರಾದ ಫಯಾಝ್ ಕಿನ್ಯ ಶುಭಹಾರೈಸಿದರು.”ಪ್ರಜಾಭಾರತ ಉಳಿಯಲಿ” ಎಂಬ ವಿಷಯದಲ್ಲಿ ಇರ್ಫಾನ್ ಅಬ್ದುಲ್ಹಾ ನೂರಾನಿ ವಿಷಯ ಮಂಡಿಸಿದರು. ಹಾಗೂ ಮೆಹಬೂಬ್ ಸಖಾಫಿ ಕಿನ್ಯ ಮುಖ್ಯ ಭಾಷಣ ಮಾಡಿದರು.


ಈ ಸಂದರ್ಭದಲ್ಲಿ ಕೆ.ಸಿ.ಎಫ್. ಬಹ್ರೈನ್ ನಾಯಕರಾದ ಹನೀಫ್ ಸಾಗ್, SYS ಕಿನ್ಯ ಸೆಂಟರ್ ಕೋಶಾಧಿಕಾರಿ ಉಸ್ಮಾನ್ ಝಹ್ರಿ, SSF ಉಳ್ಳಾಲ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಆಶಿಕ್ ಕಿನ್ಯ, ಉಮರ್ ಝಹ್ರಿ, ಸೆಕ್ಟರ್ ಮೀಡಿಯ ಕಾರ್ಯದರ್ಶಿ ಇರ್ಫಾನ್ ಮುಸ್ಲಿಯಾರ್, SYS ಹಾಗೂ SSF ನ ಸಕ್ರೀಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಕೂಡಾರ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ