75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹೊಸನಗರದ ಸಾರ್ವಜನಿಕ ಆಸ್ಪತ್ರೆಗೆ ಇಲ್ಲಿನ ಮುಸ್ಲಿಂ ಬಾಂಧವರು ಶುದ್ದ ಕುಡಿಯುವ ನೀರಿನ ಘಟಕ (RO Plant) ವನ್ನು ಸಮರ್ಪಿಸಿದರು. ಘಟಕದ ಉದ್ಘಾಟನೆ ಯನ್ನು ಹೊಸನಗರದ ವೀರ ಯೋಧ, ರಾಷ್ಟಪತಿಯವರಿಂದ ಪುರಸ್ಕೃತ ಶ್ರೀಯುತ ಜಿ. ಸುಬ್ರಹ್ಮಣ್ಯ ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಕ್ಕಳ ತಜ್ಞ ಶಾಂತರಾಜ್ ರವರು ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತುಗಳನ್ನು ಎಳೆ ಎಳೆಯಾಗಿ ವಿವರಿಸಿದರು.
ತಾII ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಇಲಿಯಾಸ್ ರವರು ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೊಸನಗರ,
ಬಿದನೂರು,ಈಸೂರು ಮುಂತಾದ ಗ್ರಾಮಗಳಲ್ಲಿ ನಡೆದ ಹೋರಾಟಗಳನ್ನು ವಿವರಿಸಿ, ಶತಕಗಳ ಕಾಲ ನಡೆದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಲಿಯಾದ ವೀರರನ್ನು ನಾವು ಇಂದು ಸ್ಮರಿಸಬೇಕಿದೆ ಎಂದರು.
ಇದೇ ಸಂಧರ್ಭದಲ್ಲಿ ಹಿರಿಯ ವೈದ್ಯರಾದ ಡಾII. ಲಿಂಗರಾಜ್ ರವರನ್ನು ಸನ್ಮಾನಿಸಲಾಯಿತು.
ಕಳೂರು ಜುಮ್ಮಾ ಮಸೀದಿಯ ಖತೀಬರಾದ ಹಾಫಿಝ್ ಅಬ್ದುಲ್ಲಾ, ಬದ್ರಿಯಾ ಶಾಫಿ ಜುಮ್ಮಾ ಮಸೀದಿ ಖತೀಬರಾದ ಮೌಲಾನ ಬದ್ರುದ್ದೀನ್ ಝೊಹ್ರಿ,ಮೊಹಮ್ಮದೀಯ ಮಸೀದಿಯ ಖತೀಬರಾದ ಷಾದಾಬ್ ರಾಹಿ. ಪ್ರಮುಖರಾದ ಬಾಷಾ ಸಾಬ್,ಅಮಾನುಲ್ಲಾ,ಅನ್ವರ್ ಸಿದ್ದೀಕ್,ಅಹಮದ್ ಸಾಬ್, ಸಲೀಂ, ಯಾಸಿರ್, ಅಬ್ದುಲ್ ರಜಾಕ್, ಸೈಯದ್, ಫಾರೂಕ್, ಶಾಬುದ್ದೀನ್, ಇಸ್ಮಾಯಿಲ್, ಮಹಮ್ಮದ್ ಅಲಿ, ಉಬೇದುಲ್ಲ, ಸದ್ದಾಂ,ರಿಹಾಬ್ ಮತ್ತಿತರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ