75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹೊಸನಗರದ ಸಾರ್ವಜನಿಕ ಆಸ್ಪತ್ರೆಗೆ ಇಲ್ಲಿನ ಮುಸ್ಲಿಂ ಬಾಂಧವರು ಶುದ್ದ ಕುಡಿಯುವ ನೀರಿನ ಘಟಕ (RO Plant) ವನ್ನು ಸಮರ್ಪಿಸಿದರು. ಘಟಕದ ಉದ್ಘಾಟನೆ ಯನ್ನು ಹೊಸನಗರದ ವೀರ ಯೋಧ, ರಾಷ್ಟಪತಿಯವರಿಂದ ಪುರಸ್ಕೃತ ಶ್ರೀಯುತ ಜಿ. ಸುಬ್ರಹ್ಮಣ್ಯ ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಕ್ಕಳ ತಜ್ಞ ಶಾಂತರಾಜ್ ರವರು ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತುಗಳನ್ನು ಎಳೆ ಎಳೆಯಾಗಿ ವಿವರಿಸಿದರು.
ತಾII ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಇಲಿಯಾಸ್ ರವರು ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೊಸನಗರ,
ಬಿದನೂರು,ಈಸೂರು ಮುಂತಾದ ಗ್ರಾಮಗಳಲ್ಲಿ ನಡೆದ ಹೋರಾಟಗಳನ್ನು ವಿವರಿಸಿ, ಶತಕಗಳ ಕಾಲ ನಡೆದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಲಿಯಾದ ವೀರರನ್ನು ನಾವು ಇಂದು ಸ್ಮರಿಸಬೇಕಿದೆ ಎಂದರು.
ಇದೇ ಸಂಧರ್ಭದಲ್ಲಿ ಹಿರಿಯ ವೈದ್ಯರಾದ ಡಾII. ಲಿಂಗರಾಜ್ ರವರನ್ನು ಸನ್ಮಾನಿಸಲಾಯಿತು.
ಕಳೂರು ಜುಮ್ಮಾ ಮಸೀದಿಯ ಖತೀಬರಾದ ಹಾಫಿಝ್ ಅಬ್ದುಲ್ಲಾ, ಬದ್ರಿಯಾ ಶಾಫಿ ಜುಮ್ಮಾ ಮಸೀದಿ ಖತೀಬರಾದ ಮೌಲಾನ ಬದ್ರುದ್ದೀನ್ ಝೊಹ್ರಿ,ಮೊಹಮ್ಮದೀಯ ಮಸೀದಿಯ ಖತೀಬರಾದ ಷಾದಾಬ್ ರಾಹಿ. ಪ್ರಮುಖರಾದ ಬಾಷಾ ಸಾಬ್,ಅಮಾನುಲ್ಲಾ,ಅನ್ವರ್ ಸಿದ್ದೀಕ್,ಅಹಮದ್ ಸಾಬ್, ಸಲೀಂ, ಯಾಸಿರ್, ಅಬ್ದುಲ್ ರಜಾಕ್, ಸೈಯದ್, ಫಾರೂಕ್, ಶಾಬುದ್ದೀನ್, ಇಸ್ಮಾಯಿಲ್, ಮಹಮ್ಮದ್ ಅಲಿ, ಉಬೇದುಲ್ಲ, ಸದ್ದಾಂ,ರಿಹಾಬ್ ಮತ್ತಿತರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ