janadhvani

Kannada Online News Paper

ಕುವೈಟ್ ಕೆಸಿಎಫ್: ಭಾರತದ 75ನೇ ಸ್ವಾತಂತ್ರೋತ್ಸವ ಹಾಗೂ ಆಝಾದಿ ಸಂದೇಶ

ಕುವೈಟ್ ಕೆಸಿಎಫ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ 75ನೇ ಸ್ವಾತಂತ್ರೋತ್ಸವ ಹಾಗೂ ಆಝಾದಿ ಸಂದೇಶ ಕಾರ್ಯಕ್ರಮವು ಫರ್ವಾಣಿಯ ಬದರ್ ಅಲ್ ಸಮ ಸಭಾಂಗಣದಲ್ಲಿ ಆ.15 ರಂದು ನಡೆಯಿತು.

ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ರವರ ಅಧ್ಯಕ್ಷತೆ ಯಲ್ಲಿ ಹಾಗೂ ರಾಷ್ಟ್ರೀಯ ಸಮಿತಿಯ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹುರಿ ಉಸ್ತಾದ್ ರವರ ದುವಾ ದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕೆಸಿಎಫ್ inc ಸಂಘಟನಾ ಕಾರ್ಯದರ್ಶಿ ಬಹುಮಾನ್ಯ ಹುಸೈನ್ ಎರ್ಮಾಡ್ ರವರು ಆಝಾದಿ ಸಂದೇಶ ಮತ್ತು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ವಿಭಾಗದ ಅಧ್ಯಕ್ಷರಾದ ಜನಾಬ್ ಯಾಕುಬ್ ಕಾರ್ಕಳ ರವರು ಸ್ವಾತಂತ್ರ್ಯ ಭಾರತದ ಹೋರಾಟಗಾರರ ಇತಿಹಾಸ ಹಾಗೂ ನಮ್ಮ ಜವಾಬ್ದಾರಿಯ ಬಗ್ಗೆ ಭಾಷಣ ಮಾಡಿದರು. ಮುಖ್ಯ ಅತಿಥಿ ಗಳಾಗಿ ಕೆಸಿಎಫ್ ಸೌತ್ ಝೋನ್ ಅಧ್ಯಕ್ಷರಾದ ಶಾಹುಲ್ ಹಮೀದ್ ಸಅದಿ ಝುಹುರಿ ಉಪಸ್ಥಿತರಿದ್ದರು.

ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಝಕರಿಯಾ ಆನೇಕಲ್ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಸಮೀರ್ ಕೆಸಿರೋಡ್ ರವರು ಧನ್ಯವಾದ ಸಲ್ಲಿಸಿದರು.

error: Content is protected !! Not allowed copy content from janadhvani.com