ನಿಗದಿತ ದರ್ಸ್ ಕಿತಾಬ್ಗಳನ್ನು ಓದಿ, ಸಂದರ್ಶನದಲ್ಲಿ ತೇರ್ಗಡೆಯಾದ ವಿದ್ವಾಂಸರಿಗೆ ಪ್ರವೇಶ ನೀಡುವ ಸಂಸ್ಥೆ ಇದಾಗಿದ್ದು ಹಗಲು ಹೊತ್ತಿನಲ್ಲಿ ಬಂದು ಕಲಿತು ಹೋಗುವ ಸ್ಥಳೀಯ ಉಲಮಾಗಳಿಗೆ ವಿಶೇಷ ಪಠ್ಯ ವ್ಯವಸ್ಥೆ ಅಳವಡಿಸಿ ಕೊಳ್ಳಲಾಗಿದೆ. ಕಳೆದ ಇಪ್ಪತ್ತೊಂದು ವರ್ಷಗಳಿಂದ ತಲಪಾಡಿ ಬಿಲಾಲ್ ಜುಮಾ ಮಸ್ಜಿದ್ನಲ್ಲಿ ಮುದರ್ರಿಸ್ ಹಾಗೂ ಖತೀಬ್ ಆಗಿ ಸೇವೆಗೈಯ್ಯುತ್ತಿರುವ
ಡಾ. ಎಮ್ಮೆಸ್ಸೆಂ. ಅಬ್ದುಲ್ ರಶೀದ್ ಸಖಾಫಿ ಝೈನೀ ಕಾಮಿಲ್ ಅವರು ಪ್ರಾಂಶುಪಾಲರಾಗಿ ಸಂಸ್ಥೆಗೆ ನೇತೃತ್ವ ಕೊಡುತ್ತಿದ್ದು, ಪ್ರಮುಖ ವಿದ್ವಾಂಸರಾದ ಹಾಫಿಝ್ ಮುಹಮ್ಮದ್ ವಹೀದ್ ನಈಮಿ ಕಾಮಿಲ್ ಸಖಾಫಿ ಅಜ್ಮೀರ್, ಮೌಲಾನಾ ಖಾರಿ ಅಹ್ಮದ್ ರಝಾ ಖಾನ್ ಮರ್ಕಝಿ ಉತ್ತರ ಪ್ರದೇಶ, ಮುಹಮ್ಮದ್ ಬಶೀರ್ ಅಹ್ಸನಿ ತೋಡಾರ್, ಜಾಬಿರ್ ಹಸನ್ ಫಾಳಿಲಿ ಉಳ್ಳಾಲ ಮುಂತಾದವರು ವಿವಿಧ ವಿಷಯಗಳ ಮುದರ್ರಿಸರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ತಲಪಾಡಿ ಸಂಯುಕ್ತ ಜಮಾಅತ್ ಸಹಾಯಕ ಖಾಝಿ, ರಾಜ್ಯ ಸುನ್ನೀ ಕೋ ಆರ್ಡಿನೇಷನ್ ಸಮಿತಿಯ ಅಧ್ಯಕ್ಷ ಕೆಪಿ ಹುಸೈನ್ ಸಅದಿ ಕೆಸಿ ರೋಡ್ ಮುಖ್ಯ ಭಾಷಣ ಮಾಡಿದರು.
ಸಮಾರಂಭದಲ್ಲಿ ಸ್ಥಳೀಯ ಜಮಾಅತ್ ಅಧ್ಯಕ್ಷ ಯಾಕೂಬ್ ಪೂಮಣ್ಣು ಅಧ್ಯಕ್ಷತೆ ವಹಿಸಿದರು.
ಪ್ರಮುಖ ವಿದ್ವಾಂಸರೂ ಪ್ರಸಿದ್ಧ ಕವಿಯೂ ಆಗಿದ್ದ ಖಾಝಿ ಬಾಪಕುಂಞಿ ಮುಸ್ಲಿಯಾರ್ ಅವರು ತಲಪಾಡಿ ಬಿಲಾಲ್ ಜುಮಾ ಮಸೀದಿಯ ಸಮೀಪದಲ್ಲಿ ಅಂತ್ಯವಿಶ್ರಾಂತಿ ಪಡೆಯುತ್ತಿದ್ದು ಅವರ ಸ್ಮರಣಾರ್ಥ ಸಂಸ್ಥೆಯ ಹೆಸರಿಗೆ ‘ಖಾಝಿ ಬಾಪಕುಂಞಿ ಮುಸ್ಲಿಯಾರ್ ಅಕಾಡೆಮಿ’ ಎಂದು ಸೇರಿಸಲಾಗಿದೆ.
ಸಮಾರಂಭದಲ್ಲಿ ಸಂಸ್ಥೆಯ ಪ್ರಿನ್ಸಿಪಾಲ್ ಡಾ. ಅಬ್ದುಲ್ ರಶೀದ್ ಝೈನೀ ಸ್ವಾಗತಿಸಿದರು.


















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ