ರಿಯಾದ್:ವಲಸಿಗರಿಗೆ ಮತ್ತೆ ದಯೆ ತೋರಿದ ಸೌದಿ ದೊರೆ ಸಲ್ಮಾನ್. ಭಾರತ ಸೇರಿದಂತೆ ಸೌದಿಗೆ ಪ್ರವೇಶ ನಿರ್ಬಂಧವಿರುವ ದೇಶಗಳ ವಲಸಿಗರಿಗೆ ಇಖಾಮ, ಮರು ಪ್ರವೇಶ ಮತ್ತು ಭೇಟಿ ವೀಸಾವನ್ನು ಉಚಿತವಾಗಿ ವಿಸ್ತರಿಸಲು ರಾಜ ಸಲ್ಮಾನ್ ಆದೇಶಿಸಿದ್ದಾರೆ. ಜವಾಝಾತ್ ನಿರ್ದೇಶನಾಲಯವು, ವಿದೇಶಿಯರ ಇಕಾಮ, ಮರು ಪ್ರವೇಶ ಮತ್ತು ಭೇಟಿ ವೀಸಾವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಘೋಷಿಸಿದೆ.
ಭಾರತ ಸೇರಿದಂತೆ ನಿಷೇಧಿತ ದೇಶಗಳಲ್ಲಿ ಸಿಲುಕಿರುವ ಸೌದಿ ವಲಸಿಗರ ಇಕಾಮ ಮತ್ತು ಮರು ಪ್ರವೇಶವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವಂತೆ ಈ ಹಿಂದೆ ರಾಜ ಸಲ್ಮಾನ್ ನಿರ್ದೇಶನ ನೀಡಿದ್ದರು. ಅದರಂತೆ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ. ಇದಕ್ಕಾಗಿ ಯಾರೂ ಕಚೇರಿಗಳನ್ನು ಸಂಪರ್ಕಿಸಬೇಕಾಗಿಲ್ಲ ಮತ್ತು ನವೀಕರಣವನ್ನು ರಾಷ್ಟ್ರೀಯ ಮಾಹಿತಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂಚಾಲಿತವಾಗಿ ಮಾಡಲಾಗುವುದು ಎಂದು ಜವಾಝಾತ್ ಹೇಳಿದೆ.
ಪ್ರಯಾಣದ ನಿರ್ಬಂಧಗಳನ್ನು ಹೊಂದಿರುವ ದೇಶಗಳಲ್ಲಿರುವ ವಲಸಿಗರ ಇಕಾಮಾ, ಮರು ಪ್ರವೇಶ ಮತ್ತು ಸಂದರ್ಶಕರ ವೀಸಾಗಳನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವಂತೆ ರಾಜರು ಈ ಹಿಂದೆ ನಿರ್ದೇಶನ ನೀಡಿದ್ದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್