ಬೆಂಗಳೂರು, ಆ.18: ಕೊರೋನಾ ಆತಂಕದ ನಡುವೆಯೇ ನಾಳೆಯಿಂದ ಅಂದರೆ ಆಗಸ್ಟ್ 19ರಿಂದ ದ್ವಿತೀಯ ಪರೀಕ್ಷೆ ಪ್ರಾರಂಭವಾಗಲಿದೆ. ಹೀಗಾಗಿ ಪಿಯು ಬೋರ್ಡ್ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕೊರೋನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗಸ್ಟ್ 19ರಿಂದ ಸೆಪ್ಟೆಂಬರ್ 3 ರವರೆಗೆ ಸೆಕೆಂಡ್ ಪಿಯು ಪರೀಕ್ಷೆ ಜರುಗಲಿದೆ. ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 17469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್ , 5093 ಪ್ರೆಶರ್ಸ್ ವಿದ್ಯಾರ್ಥಿಗಳು ಇದ್ದಾರೆ ಎಂದು ಹೇಳಿದರು.
ರಾಜ್ಯದ 187 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತೆ. ಕೋವಿಡ್ ಸೋಂಕು ಇದ್ರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕೋವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ಇರುತ್ತೆ ಎಂದು ತಿಳಿಸಿದರು.
ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ RT-PCR ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೇರಳ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ RT-PCR ಟೆಸ್ಟ್ನ್ನು ಕಡ್ಡಾಯವಾಗಿ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್ ತರಬೇಕಿದೆ. 72 ಗಂಟೆಗಳ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ನಿರ್ದೇಶಕಿ ಸ್ನೇಹಲ್ ಹೇಳಿದ್ದಾರೆ.
ಒಂದು ಪರೀಕ್ಷಾ ಕೊಠಡಿಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ಡೆಸ್ಕ್ನಲ್ಲಿ ಒಬ್ಬರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಇನ್ನು, ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ.
ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಎಲ್ಲಾ ವ್ಯವಸ್ಥೆಯನ್ನು ಮಾಡಿದೆ. ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಇದುವರೆಗೆ ಪರೀಕ್ಷೆ ಬರೆಯುವ ಯಾವ ವಿದ್ಯಾರ್ಥಿಯೂ ಕೊರೋನಾ ಸೋಂಕಿನ ಕುರಿತು ಮಾಹಿತಿ ನೀಡಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಸ್ಪಷ್ಟ ಪಡಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ