ಅಲ್ಲಾಹನ ದಾರಿಯಲ್ಲಿ ವಿದ್ಯಾರ್ಜನೆಗೈದು ವಿಶುದ್ಧ ಕು಼ರ್’ಆನ್ ಸಂಪೂರ್ಣವಾಗಿ ಕಂಠ ಪಾಠ ಮಾಡಿ ಹಾಫಿಳ್ ಪದವಿಯನ್ನು ಪಡೆದ ಮುಬಶ್ಶಿರ್ ಎಂಬ ವಿದ್ಯಾರ್ಥಿಯನ್ನು, ಕಳೆದೆರಡು ದಶಕಗಳಿಗೂ ಅಧಿಕವಾಗಿ, ಕನ್ಯಾನ ಪರಿಸರದಲ್ಲಿ ಬಡ, ಅಶಕ್ತ ಹಾಗೂ ನಿರ್ಗತಿಕರ ಆಶಾಕಿರಣವಾಗಿ ಕಾರ್ಯಾಚರಿಸುತ್ತಿರುವ ಕನ್ಯಾನ ಮುಸ್ಲಿಂ ಸೇವಾ ಸಮಿತಿ ವತಿಯಿಂದ 20-08-2021 ಶುಕ್ರವಾರ ಮಗ್ರಿಬ್ ನಮಾಝಿನ ಬಳಿಕ ಕನ್ಯಾನ ರಹ್ಮಾನಿಯಾ ಜುಮಾ ಮಸ್ಜಿದ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಶಸ್ತಿ ಹಾಗೂ ನಗದು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
2019-20 ನೇ ಸಾಲಿನಲ್ಲಿ SSLC ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ 8 ವಿದ್ಯಾಥಿ೯ಗಳನ್ನೂ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.
ಸಮಿತಿಯ ಮುಂದಿನ ಆಶಾದಾಯಕ ಬೆಳವಣಿಗೆಗಾಗಿ ಹಾಗೂ ಉನ್ನತ ಸೇವಾ ಚಟುವಟಿಕೆಗಳಿಗಾಗಿ ಟ್ರಸ್ಟ್ ಆಗಿ ನವೀಕರಣಗೊಂಡ ಸಮಿತಿಯ ನಾಮವನ್ನು *ಕನ್ಯಾನ ಮುಸ್ಲಿಂ ಸೇವಾ ಚಾರಿಟೇಬಲ್ ಟ್ರಸ್ಟ್* ಎಂಬುದಾಗಿ ಈ ಸಂದರ್ಭದಲ್ಲಿ ಘೋಷಿಸಲಾಯಿತು.
ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರಹಿಮಾನ್ ನೆಕ್ಲಾಜೆ, ಧಾರ್ಮಿಕ ಸಲಹೆಗಾರರಾದ ಅಬ್ದುಲ್ ಹಮೀದ್ ಸಖಾಫಿ ಪಾಡಿ, ಹಾಜಿ ಎಂ.ಕೆ.ಮುಹಮದ್ ಕುಂಞ , ಅಶ್ರಫ್ ಸಖಾಫಿ, ಅಝೀಝ್ ಮದನಿ ಮತ್ತು ಹಿರಿಯ ಸದಸ್ಯರುಗಳು ಹಾಗೂ ನೇತಾರರು ಭಾಗವಹಿಸಿದರು.
ಕಾರ್ಯದರ್ಶಿ ನೌಸಿಫ್ ಮೂಡೈಮೂಲೆ ಸ್ವಾಗತಿಸಿ ಅಶ್ರಫ್ ಬಂಡಿತ್ತಡ್ಕ ವಂದಿಸಿದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ