ಅಲ್ಲಾಹನ ದಾರಿಯಲ್ಲಿ ವಿದ್ಯಾರ್ಜನೆಗೈದು ವಿಶುದ್ಧ ಕು಼ರ್’ಆನ್ ಸಂಪೂರ್ಣವಾಗಿ ಕಂಠ ಪಾಠ ಮಾಡಿ ಹಾಫಿಳ್ ಪದವಿಯನ್ನು ಪಡೆದ ಮುಬಶ್ಶಿರ್ ಎಂಬ ವಿದ್ಯಾರ್ಥಿಯನ್ನು, ಕಳೆದೆರಡು ದಶಕಗಳಿಗೂ ಅಧಿಕವಾಗಿ, ಕನ್ಯಾನ ಪರಿಸರದಲ್ಲಿ ಬಡ, ಅಶಕ್ತ ಹಾಗೂ ನಿರ್ಗತಿಕರ ಆಶಾಕಿರಣವಾಗಿ ಕಾರ್ಯಾಚರಿಸುತ್ತಿರುವ ಕನ್ಯಾನ ಮುಸ್ಲಿಂ ಸೇವಾ ಸಮಿತಿ ವತಿಯಿಂದ 20-08-2021 ಶುಕ್ರವಾರ ಮಗ್ರಿಬ್ ನಮಾಝಿನ ಬಳಿಕ ಕನ್ಯಾನ ರಹ್ಮಾನಿಯಾ ಜುಮಾ ಮಸ್ಜಿದ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಶಸ್ತಿ ಹಾಗೂ ನಗದು ನೀಡಿ ಸನ್ಮಾನಿಸಿ ಗೌರವಿಸಲಾಯಿತು.
2019-20 ನೇ ಸಾಲಿನಲ್ಲಿ SSLC ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ 8 ವಿದ್ಯಾಥಿ೯ಗಳನ್ನೂ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.
ಸಮಿತಿಯ ಮುಂದಿನ ಆಶಾದಾಯಕ ಬೆಳವಣಿಗೆಗಾಗಿ ಹಾಗೂ ಉನ್ನತ ಸೇವಾ ಚಟುವಟಿಕೆಗಳಿಗಾಗಿ ಟ್ರಸ್ಟ್ ಆಗಿ ನವೀಕರಣಗೊಂಡ ಸಮಿತಿಯ ನಾಮವನ್ನು *ಕನ್ಯಾನ ಮುಸ್ಲಿಂ ಸೇವಾ ಚಾರಿಟೇಬಲ್ ಟ್ರಸ್ಟ್* ಎಂಬುದಾಗಿ ಈ ಸಂದರ್ಭದಲ್ಲಿ ಘೋಷಿಸಲಾಯಿತು.
ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರಹಿಮಾನ್ ನೆಕ್ಲಾಜೆ, ಧಾರ್ಮಿಕ ಸಲಹೆಗಾರರಾದ ಅಬ್ದುಲ್ ಹಮೀದ್ ಸಖಾಫಿ ಪಾಡಿ, ಹಾಜಿ ಎಂ.ಕೆ.ಮುಹಮದ್ ಕುಂಞ , ಅಶ್ರಫ್ ಸಖಾಫಿ, ಅಝೀಝ್ ಮದನಿ ಮತ್ತು ಹಿರಿಯ ಸದಸ್ಯರುಗಳು ಹಾಗೂ ನೇತಾರರು ಭಾಗವಹಿಸಿದರು.
ಕಾರ್ಯದರ್ಶಿ ನೌಸಿಫ್ ಮೂಡೈಮೂಲೆ ಸ್ವಾಗತಿಸಿ ಅಶ್ರಫ್ ಬಂಡಿತ್ತಡ್ಕ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ