ಕರ್ನಾಟಕ ರಾಜ್ಯ ಸುನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಜಿಲ್ಲಾ ಪದಾಧಿಕಾರಿಗಳ ಕ್ಯಾಪೊ ಮೀಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 24 ಮಂಗಳವಾರ ಬೆಳಿಗ್ಗೆ 10:00 ಗಂಟೆಗೆ ಮರ್ಕಝ ಸಅದ ಶಿವಮೊಗ್ಗದಲ್ಲಿ ನಡೆಯಲಿರುವುದು .
ಎಸ್ಸೆಸ್ಸೆಫ್ ರಾಜ್ಯ ನಾಯಕ ಸಯ್ಯಿದ್ ಅಲವೀ ತಂಙಳ್ ಕರ್ಕಿ ದುವಾ ನೆರವೇರಿಸಲಿರುವರು. ಎಸ್.ವೈ.ಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಜಬ್ಬಾರ್ ಸಅದಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ರಾಜ್ಯ ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಲ್ ಸುಫಿಯಾನ್ ಸಖಾಫಿ ಹಾಗೂ
ಎಸ್ಸೆಸ್ಸೆಫ್ ರಾಜ್ಯ ನಾಯಕ ನೌಫಲ್ ಸಖಾಫಿ ಕಳಸರವರು ಪ್ರಾಸ್ತಾವಿಕ ಭಾಷಣ ಮಾಡಲಿರುವರು
ಈ ಕಾರ್ಯಕ್ರಮದಲ್ಲಿ ಕರ್ನಾಟಕ ದಕ್ಷಿಣ ಭಾಗದ 10 ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.