ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ಸೂರಿಕುಮೇರು ಬ್ರಾಂಚ್ ಕಮಿಟಿ ಇದರ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 06 ಸೋಮವಾರ ಹಾರಿಸ್ ಯೂಸುಫ್ ರವರ ನಿವಾಸದಲ್ಲಿ ನಡೆಯಿತು. ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅಲ್ ಫುರ್ಖಾನಿ ಮಂಜನಾಡಿ ದುಆ ನೆರವೇರಿಸಿದರು,ಯೂಸುಫ್ ಹಾಜಿ ಸೂರಿಕುಮೇರು ಅಧ್ಯಕ್ಷತೆ ವಹಿಸಿದ್ದರು.
ಅಕ್ಬರ್ ಅಲೀ ಸಅದಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು,ಕಾರ್ಯದರ್ಶಿ ಸಲೀಂ ಮಾಣಿ ಸ್ವಾಗತಿಸಿ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು, ಬಳಿಕ ಸಭೆಯ ಅನುಮೋದನೆ ಪಡೆದು ಕಮಿಟಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿಯನ್ನು ರಚಿಸಲಾಯಿತು, ಅದರಂತೆ ಅಧ್ಯಕ್ಷರಾಗಿ ಅಬ್ದುಲ್ ಕರೀಂ ನೆಲ್ಲಿ ಸೂರಿಕುಮೇರು, ಉಪಾಧ್ಯಕ್ಷರಾಗಿ ಹಂಝ ಕಾಯರಡ್ಕ ಸೂರಿಕುಮೇರು, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಮಾಣಿ,ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಪಾರ್ಪಜೆ ಮಾಣಿ,ಕೋಶಾಧಿಕಾರಿಯಾಗಿ ಇಬ್ರಾಹಿಂ ಮುಸ್ಲಿಯಾರ್ ಹಳೀರ,ಇಸಾಬಾ ಸೆಕ್ರೆಟರಿಯಾಗಿ ಹನೀಫ್ ಸಂಕ ಸೂರಿಕುಮೇರು, ದಅವಾ ಸೆಕ್ರೆಟರಿಯಾಗಿ ಅಬ್ದುಲ್ ರಝಾಕ್ ಮದನಿ,ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲ್ ಖಾದರ್ ಗುಂಡ್ಯಡ್ಕ ಬರಿಮಾರು,ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಸೂರಿಕುಮೇರು, ಅಕ್ಬರ್ ಅಲೀ ಸಅದಿ ಸೂರಿಕುಮೇರು,ಅಬ್ದುಲ್ ಫತ್ತಾಹ್ ಮಾಣಿ, ಸುಲೈಮಾನ್ ಸೂರಿಕುಮೇರು, ಯೂಸುಫ್ ಹಾಜಿ ಸೂರಿಕುಮೇರು ಎಂಬವರನ್ನು ಆರಿಸಲಾಯಿತು. ಸೆಂಟರ್ ಕೌನ್ಸಿಲರ್ಗಳಾಗಿ ಹನ್ನೊಂದು ಜನರನ್ನು ನೇಮಕ ಮಾಡಲಾಯಿತು, ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಸಂಘಟನಾ ತರಬೇತಿ ನಡೆಸಿಕೊಟ್ಟರು, ಮಹಾಸಭೆಯ ವೀಕ್ಷಕರಾಗಿ ಎಸ್ವೈಎಸ್ ಮಾಣಿ ಸೆಂಟರ್ನಿಂದ ಪ್ರಧಾನ ಕಾರ್ಯದರ್ಶಿ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ, ಯಾಕೂಬ್ ನಚ್ಚಬೆಟ್ಟು,ಹಬೀಬ್ ಶೇರಾ ಕಾರ್ಯ ನಿರ್ವಹಿಸಿದರು, ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ