janadhvani

Kannada Online News Paper

ಎಸ್ಸೆಸ್ಸೆಪ್ ಪ್ರತಿಭೋತ್ಸವ ಮಾಹಿತಿ ಕಾರ್ಯಾಗಾರ

ಮಂಗಳೂರು:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ವತಿಯಿಂದ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಪ್ರತಿಭಾ ಅನ್ವೇಷಣೆ ಪ್ರತಿಭೋತ್ಸವದ ಮಾಹಿತಿ ಕಾರ್ಯಾಗಾರ ಎಸ್ಸೆಸ್ಸೆಪ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗರವರ ಅಧ್ಯಕ್ಷತೆಯಲ್ಲಿ ಸುನ್ನೀ ಜಂಇಯ್ಯತುಲ್ ಉಲಮಾ ಕಛೇರಿ ಮಂಗಳೂರಿನಲ್ಲಿ ನಡೆಯಿತು.

ಎಸ್ಸೆಸ್ಸೆಪ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಾಗಾರವನ್ನು ಉದ್ಘಾಟಿಸಿದರು. ಪ್ರತಿಭೋತ್ಸವ ಸಮಿತಿ ಚಯರ್ಮ್ಯಾನ್ ಕೆ.ಎಂ ಮುಸ್ತಫಾ ನಈಮಿ ಹಾವೇರಿ ಮಾಹಿತಿಯನ್ನು ನೀಡಿದರು.

ಕಾರ್ಯಾಗಾರದಲ್ಲಿ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ಕೊಡಗು,ರಾಜ್ಯ ನಾಯಕರಾದ ಮುನೀರ್ ಸಖಾಫಿ ಉಳ್ಳಾಲ,ಅಝೀಝ್ ಸಖಾಫಿ ಕೊಡಗು ಉಪಸ್ಥಿತರಿದ್ದರು.
ರಾಜ್ಯ ಪ್ರತಿಭೋತ್ಸವ ಸಮಿತಿ ಕನ್ವೀನರ್ ವಾಜಿದ್ ಹಾಸನ ಸ್ವಾಗತಿಸಿ,ಕೊನೆಗೆ ವಂದಿಸಿದರು.