ಮಂಗಳೂರು, ಸೆ.8 : ಕೇರಳದಲ್ಲಿ ಕೊರೋನ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳಲು ಉದ್ದೇಶಿಸಿರುವವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇದ್ಯಾದಿ ಎಲ್ಲ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ್ಕೆ ಪ್ರವೇಶಿಸದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದಿದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ