ಮಂಗಳೂರು, ಸೆ.8 : ಕೇರಳದಲ್ಲಿ ಕೊರೋನ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳಲು ಉದ್ದೇಶಿಸಿರುವವರು ಕೂಡ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇದ್ಯಾದಿ ಎಲ್ಲ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ್ಕೆ ಪ್ರವೇಶಿಸದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದಿದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ