ಹಿರಿಯ ವಿದ್ವಾಂಸರೂ, ಕರ್ನಾಟಕ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷರೂ ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿಗಳೂ ಆಗಿದ್ದ, ತಾಜುಲ್ ಫುಖಹಾಅ ಖಾಝಿ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ರವರ ಪ್ರಥಮ ವಾರ್ಷಿಕ ಅನುಸ್ಮರಣಾ ಮಜ್ಲಿಸ್ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಅಧೀನದಲ್ಲಿ ಸೆಪ್ಟೆಂಬರ್ 14 ಮಂಗಳವಾರ ಬೆಳಿಗ್ಗೆ ಗಂಟೆ 10 ರಿಂದ ಮಧ್ಯಾಹ್ನ 1.30ರ ತನಕ ಚರಿತ್ರೆ ಪ್ರಸಿದ್ದವಾದ ಮಾಲಿಕಿಬ್ನು ದೀನಾರ್ ಮಸ್ಜಿದ್ ಬಾರ್ಕೂರು ನಲ್ಲಿ ನಡೆಯಲಿದೆ.
ಖತಮುಲ್ ಕುರ್ ಆನ್, ತಹ್ಲೀಲ್ ಸಮರ್ಪಣೆ,ಅನುಸ್ಮರಣಾ ಭಾಷಣ, ಸಾಮೂಹಿಕ ದುಆ ಮಜ್ಲಿಸ್ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ.
ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ರಾಜ್ಯ ಎಸ್ ವೈ ಎಸ್ ಕಾರ್ಯದರ್ಶಿ ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ, ಅಸ್ಸಯ್ಯಿದ್ ಜುನೈದ್ ಅರ್ರಿಫಾಯೀ ತಂಙಳ್ ರಂಗಿನಕೆರೆ , ಡಿ ಕೆ ಎಸ್ ಸಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷರಾದ ಅಸ್ಸಯ್ಯಿದ್ ಮುಹಮ್ಮದ್ ತಂಙಳ್ ಜಿದ್ದಾ ಮುಂತಾದ ಉಲಮಾ,ಉಮರಾ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿರುವರು.
ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಹಾಜಿ ಪಿ ಅಬೂಬಕ್ಕರ್ ನೇಜಾರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಯುಕ್ತ ಜಮಾಅತ್ ಸಂಘಟನಾ ಕಾರ್ಯದರ್ಶಿ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ