ಬೆಂಗಳೂರು. 14 ಸೆ: ಕರ್ನಾಟಕದಲ್ಲಿ ಜಾರಿಗೊಳಿಸಿದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ ವ್ಯಕ್ತಪಡಿಸಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಈ ನೀತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ , ಪ್ರತಿಭಟಿಸಿದರು.

ಕ್ಯಾಂಪಸ್ ಫ್ರಂಟ್ ರಾಜ್ಯ ಪ್ರ.ಕಾರ್ಯದರ್ಶಿ ಅನೀಸ್ ಕುಂಬ್ರ ಮಾತನಾಡಿ ಮೂರು ದಶಕಗಳ ನಂತರ ಜಾರಿಗೊಳಿಸಲು ಉದ್ದೇಶಿಸಿರುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಹೊಸ ಬದಲಾವಣೆಯ ನಿರೀಕ್ಷೆಯಲ್ಲಿದ್ದರು, ಆದರೆ ಈ ನಿರೀಕ್ಷೆಗೆ ತದ್ವಿರುದ್ದವಾಗಿ ವಾಸ್ತವ್ಯತೆಯಿಲ್ಲದ ಜನರನ್ನು ಕನಸಿನ ಲೋಕದಲ್ಲಿ ತೇಲಾಡಿಸುವ ಅಸಮರ್ಪಕ ಹಾಗೂ ಅವೈಜ್ಞಾನಿಕವಾದ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗುವ ರೀತಿಯಲ್ಲಿ ಕ್ಯಾಬಿನೆಟ್ ಸಭೆ ಕರೆದು ಲೋಕಸಭೆಯಲ್ಲಾಗಲಿ, ವಿಧಾನಸಭೆಯಲ್ಲಾಗಲಿ ಚರ್ಚೆಗೆ ಒಳಪಡಿಸದೆ ಹಿಂಬದಿ ಬಾಗಿಲಿನ ಮುಖಾಂತರ ಜಾರಿಗೊಳಿಸಿರುವುದರ ಹಿಂದಿರುವ ದುರುದ್ದೇಶವನ್ನು ಕ್ಯಾಂಪಸ್ ಫ್ರಂಟ್ ಅರಿತಿದೆ.ಈ ನೀತಿಯು ಶಿಕ್ಷಣವನ್ನು ಕೇಂದ್ರೀಕರಿಸುವುದರೊಂದಿಗೆ ಖಾಸಗೀಕರಣಕ್ಕೆ ಒತ್ತು ನೀಡುವ ಹಾಗೂ ಶಿಕ್ಷಣವನ್ನು ಕೇಸರೀಕರಣಗೊಳಿಸುವ ಹುನ್ನಾರಹೊಂದಿದೆ.

2016 ರಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗೊಳಿಸಿದ ಸುಬ್ರಮಣ್ಯಂ ನೇತೃತ್ವದ ಸಮಿತಿಯ ವರದಿಯನ್ನು ಯಾಕಾಗಿ ಸಾರ್ವಜನಿಕಗೊಳಿಸಲಿಲ್ಲ ಹಾಗೂ ಅವರ ವರದಿಯ ಅಭಿಪ್ರಾಯಗಳನ್ನು ಯಾಕಾಗಿ ಪರಿಗಣಿಸಲಿಲ್ಲ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ , ತದನಂತರ ಕಸ್ತೂರಿ ರಂಗನ್ ರವರ ನೇತೃತ್ವದಲ್ಲಿ ರೂಪಿಸಲಾದ ನೀತಿಯಲ್ಲಿರುವ ತೊಡಕುಗಳ ಕುರಿತು 2019 ರಲ್ಲಿಯೇ ಕ್ಯಾಂಪಸ್ ಫ್ರಂಟ್ ವಿರೋಧ ವ್ಯಕ್ತಪಡಿಸಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃಧ್ದಿ ಸಚಿವಾಲಯಕ್ಕೆ ಶಿಫಾರಸ್ಸು ವರದಿ ನೀಡಿತ್ತು. ಆದರೆ ನಮ್ಮ ಹಾಗೂ ಹಲವಾರು ಶಿಕ್ಷಣ ತಜ್ಞರು ನೀಡಿದ ಯಾವ ಅಭಿಪ್ರಾಯಗಳನ್ನು ಸಹ ಪರಿಗಣಿಸದೆ ಸರ್ವಾಧಿಕಾರಿಯಾಗಿ ಕೈಗೊಂಡ ತೀರ್ಮಾನವಾಗಿದೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ, ಇದನ್ನು ಒಪ್ಪಲು ಖಂಡಿತ ಸಾಧ್ಯವಿಲ್ಲವೆಂದರು.

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ – ಆಸ್ಪತ್ರೆಗೆ ದಾಖಲು
ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿ ಪೋಲಿಸ್ ದೌರ್ಜನ್ಯ ಎಸಗಿದ್ದಾರೆ. ಹಲವಾರು ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು ಹಲವು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಪ್ರ. ಕಾರ್ಯದರ್ಶಿ ಅನೀಸ್ ಕುಂಬ್ರ, ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ, ರಾಜ್ಯ ಸಮಿತಿ ಸದಸ್ಯೆ ಮುರ್ಶಿದಾ ಮಂಗಳೂರು, ಬೆಂಗಳೂರು ಜಿಲ್ಲಾಧ್ಯಕ್ಷ ಆಕಿಬ್ ಬೆಂಗಳೂರು ಹಾಗೂ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ