ಅರಿವು ಶೈಕ್ಷಣಿಕ ಸಾಲ ನವೀಕರಣವನ್ನು ನಿಲ್ಲಿಸಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಸರಕಾರಿ ನಿಗಮ ಕೆಎಂಡಿಸಿಯ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಅಯೂಬ್ ಅಗ್ನಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಕ್ಷೇತ್ರವು ದುಬಾರಿಯಾಗಿ ಪರಿಣಮಿಸುತ್ತಿರುವ ಈ ಸನ್ನಿವೇಶದಲ್ಲಿ ಉನ್ನತ ಶಿಕ್ಷಣದ ಕನಸು ಹೊತ್ತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಈ ನಿಗಮದಿಂದ ದೊರಕುತ್ತಿದ್ದ ಸಾಲ ಯೋಜನೆಯು ಬಹಳಷ್ಟು ನೆರವಾಗುತ್ತಿತ್ತು. ಆದರೆ ಸರಕಾರವು ಅಲ್ಪಸಂಖ್ಯಾತರ ನಿಗಮದ ಮೂಲಕ ನೀಡುತ್ತಿದ್ದ ಶೈಕ್ಷಣಿಕ ನೆರವಿನ ಅನುದಾನವನ್ನು ನಿಧಾನವಾಗಿ ಕಡಿತಗೊಳಿಸುತ್ತಾ ಬರುತ್ತಿದೆ. ಈ ಹಿಂದೆ ಪಿ.ಎಚ್.ಡಿ ಮತ್ತು ಎಂ.ಫಿಲ್. ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್ ಮೊತ್ತವನ್ನೂ ಕೋವಿಡ್ ನೆಪವೊಡ್ಡಿ ಕಡಿತಗೊಳಿಸಲಾಗಿತ್ತು. ಇವೆಲ್ಲವೂ ಅಲ್ಪಸಂಖ್ಯಾತ ಸಮಯದಾಯಗಳನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರವಾಗಿದೆ.
ಪ್ರಿ ಮೆಟ್ರಿಕ್- ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ ಮೊತ್ತವೂ ಸಮರ್ಪಕವಾಗಿ ದೊರಕುತ್ತಿಲ್ಲ ಎಂಬ ದೂರುಗಳು ವ್ಯಾಪಕವಾಗಿವೆ. ರಾಜ್ಯದ ಬಿಜೆಪಿ ಸರಕಾರವು ತಾಳುತ್ತಿರುವ ಈ ರೀತಿಯ ಅಲ್ಪಸಂಖ್ಯಾತ ವಿರೋಧಿ ಧೋರಣೆಯು ಎಲ್ಲರನ್ನೊಳಗೊಂಡ ಅಭಿವೃದ್ಧಿಗೆ ಮಾರಕವಾಗಿದೆ.
ಅರಿವು ಶೈಕ್ಷಣಿಕ ಸಾಲವನ್ನು ತಡೆ ಹಿಡಿಯುವುದರಿಂದ ಅಲ್ಪಸಂಖ್ಯಾತ ಸಮುದಾಯದ ಸಾವಿರಾರು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ಕಮರಿ ಹೋಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ತಾರತಮ್ಯ ನೀತಿಯನ್ನು ಕೈಬಿಟ್ಟು ಸಂವಿಧಾನದ ಆಶಯದಡಿಯಲ್ಲಿ ಕಾರ್ಯ ನಿರ್ವಹಿಸಲು ಮುಂದಾಗಬೇಕು. ಅದೇ ರೀತಿ ವಿದ್ಯಾರ್ಥಿ ಸಮುದಾಯವೂ ಪ್ರಜಾಸತ್ತಾತ್ಮಕ ಹೋರಾಟಗಳ ಮೂಲಕ ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕೆಂದು ಅಯೂಬ್ ಅಗ್ನಾಡಿ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ