ಕೊಡಗು : ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಡಪಾಲ ಮಹ್ಮೂದ್ ಮುಸ್ಲಿಯಾರ್ (77) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಿಕ್ಕರೆ ಅಬ್ದುಲ್ ಖಾದರ್ ಮಾಸ್ಟರ್ ಹಾಗೂ ಅಸ್ಮಾಅ್ ದಂಪತಿಯ ಪುತ್ರ ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಪ್ರಾಥಮಿಕ ಶಿಕ್ಷಣವನ್ನು ಕೊಡಗಿನ ಕುಪ್ಪಾದಲ್ಲಿ ಮುಗಿಸಿದರು. ನಂತರ ಧಾರ್ಮಿಕ ಶಿಕ್ಷಣವನ್ನು ಕೊಂಡಗೇರಿ, ತಲಶ್ಶೇರಿ ಸಮೀಪದ ಪೊಕೋಂ ಹಾಗೂ ತಳಿಪರಂಬುವಿನ ತಿರುವಟ್ಟೂರು ಮತ್ತು ಕಣ್ಣೂರು ಜಿಲ್ಲೆಯ ಕಾಂಬದಾರ್ ಮತ್ತು ಪಾಪಿನಿಶೇರಿಯಲ್ಲಿ ಪಡೆದರು.
1963ರಿಂದ ನಾಪೊಕ್ಲು, ಎಡಪಾಲ, ಮೂರ್ನಾಡ್, ವಿರಾಜಪೇಟೆ, ಎಮ್ಮೆಮಾಡು, ಮೈಸೂರು ಮುಂತಾದ ಕಡೆ ಮುದರ್ರಿಸ್, ಖತೀಬರಾಗಿ ಸೇವೆ ಸಲ್ಲಿಸಿದ್ದಾರೆ. 1968-69ರಲ್ಲಿ ಕೊಡಗಿನ ಖತೀಬರನ್ನು ಒಟ್ಟು ಸೇರಿಸಿ ‘ಜಂಇಯತುಲ್ ಖುತಬಾಅ್’, 1969-70ರಲ್ಲಿ ‘ಕೂರ್ಗು ಮುಸ್ಲಿಂ ಅಸೋಸಿಯೇಶನ್’, 1971-72ರಲ್ಲಿ ‘ಕೂರ್ಗ್ ಜಿಲ್ಲಾ ಜಂಇಯತುಲ್ ಉಲಮಾಗೆ’ ಚಾಲನೆ ನೀಡಿದರು. ಅದರೊಂದಿಗೆ ಪ್ರತ್ಯೇಕ ಮದ್ರಸ ಸಿಲೆಬಸ್ ರೂಪಿಕರಿಸಬೇಕೆಂಬ ಬೇಡಿಕೆಗೆ “ಕೊಡಗು ಜಿಲ್ಲಾ ಇಸ್ಲಾಂ ವಿದ್ಯಾಭ್ಯಾಸ ಸಂಸ್ಥೆ” ಎಂಬ ಹೆಸರಲ್ಲಿ ವಿದ್ಯಾಭ್ಯಾಸ ಬೋರ್ಡನ್ನು ಜಾರಿಗೆ ತರಲಾಯಿತು. ‘ನೂರುಲ್ ಇಸ್ಲಾಂ ಸಭಾ’ ಎಂಬ ಸಂಘಟನೆಗೆ ರೂಪು ನೀಡಿ ಅದರ ಅಧೀನದಲ್ಲಿ ಇಂಗ್ಲೀಷ್ ಮೀಡಿಯಂ ಶಾಲೆ, ಮದ್ರಸಗಳನ್ನು ಕಟ್ಟಿ ಬೆಳೆಸಿದ್ದರು. ನಂತರ ‘ಮರ್ಕಝುಲ್ ಹಿದಾಯ ಎಜುಕೇಶನಲ್ ಸೆಂಟರ್’ಗೆ ಚಾಲನೆ ನೀಡಲಾಯಿತು.
ಅವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ