ಕರ್ನಾಟಕ ರಾಜ್ಯದಲ್ಲಿ ಎಸ್ ಎಸ್ ಎಫ್ ಅಸ್ತಿತ್ವಕ್ಕೆ ಬಂದು 19 ಸೆಪ್ಟಂಬರ್ 2021 ಕ್ಕೆ 32 ವರ್ಷಗಳನ್ನು ಪೂರ್ಣಗೊಳಿಸಿ 33 ನೇ ವರ್ಷಕ್ಕೆ ಪಾದಾರ್ಪಣೆ. ಇದರ ಅಂಗವಾಗಿ ಎಸ್ ಎಸ್ ಎಫ್ ಗಾಂಧಿನಗರ ಶಾಖೆ ವತಿಯಿಂದ ಎಸ್ ಎಸ್ ಎಫ್ ಧ್ವಜ ದಿನಾಚರಣೆಯನ್ನು ಅನ್ಸಾರ್ ಕಾಂಪ್ಲೆಕ್ಸ್ ನಲ್ಲಿ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖಾಧ್ಯಕ್ಷರಾದ ಅಬ್ದುಲ್ ರಶೀದ್ ಝೈನಿ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ಎಸ್ ಎಸ್ ಎಫ್ ಗಾಂಧಿನಗರ ಶಾಖೆಯ ಸ್ಥಾಪಕಾಧ್ಯಕ್ಷರಾದ ರಿಯಾಝ್ ಕೆ ಎ, ಎಸ್ ವೈ ಎಸ್ ಸುಳ್ಯ ನಾಯಕರಾದ ಅಬೂಬಕ್ಕರ್ ಸಿದ್ದೀಕ್ ಕಟ್ಟೆಕಾರ್ಸ್ ಹಾಗೂ ಎಸ್ ವೈ ಎಸ್ ಸುಳ್ಯ ಸೆಂಟರ್ ಕೊಶಾಧಿಕಾರಿ ರಫೀಕ್ ಚಾಯ್ಸ್ ರವರು ಧ್ವಜಾರೋಹಣ ನೆರವೇರಿಸಿದರು.
ಕೆ ಸಿ ಎಫ್ ನಾಯಕರಾದ ಕಬೀರ್ ಜಟ್ಟಿಪಲ್ಲ ರವರು ಎಸ್ ಎಸ್ ಎಫ್ ಧ್ವಜ ದಿನದ ಅಂಗವಾಗಿ ಸಂದೇಶ ಭಾಷಣ ನಡೆಸಿದರು. ಇದೇ ಸಂದರ್ಭದಲ್ಲಿ ಮೊನ್ನೆ ನಮ್ಮನ್ನಗಲಿದ ಕೊಡಗು ಜಿಲ್ಲಾ ಸಹಾಯಕ ಖಾಝಿ ಮೆಹಮೂದ್ ಮುಸ್ಲಿಯಾರ್ ಎಡಪಾಲಂ ಅವರ ಹೆಸರಿನಲ್ಲಿ ತಹಲೀಲ್ ಹಾಗೂ ದುವಾ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಕೆ ಸಿ ಎಫ್ ನಾಯಕರಾದ ಮುನೀರ್, ಸುಳ್ಯ ಡಿವಿಷನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ಸುಳ್ಯ ಸೆಕ್ಟರ್ ಅಧ್ಯಕ್ಷ ಸಿದ್ದೀಕ್ ಬಿ ಎ ಶಾಖಾ ಕೊಶಾಧಿಕಾರಿ ಆಬಿದ್ ಕಲ್ಲುಮುಟ್ಲು, ಶಾಖಾ ಸದಸ್ಯರಾದ ಸಾದಿಕ್ ಪಿ ಜಿ, ಬಶೀರ್ ಕಲ್ಲುಮುಟ್ಲು, ಕಮಾಲ್ ಎ ಬಿ ಉಪಸ್ಥಿತರಿದ್ದರು.ಶಾಖಾ ಸದಸ್ಯ ಆರಿಫ್ ಬುಶ್ರಾ ಸ್ವಾಗತಿಸಿ ಶಾಖಾ ಪ್ರಧಾನ ಕಾರ್ಯದರ್ಶಿ ಸಿಯಾದ್ ಜಯನಗರ ವಂದಿಸಿದರು.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್