janadhvani

Kannada Online News Paper

ಕೆಸಿಎಫ್ ಒಮಾನ್: ಶೈಖುನಾ ಎಡಪ್ಪಾಲಂ ಮಹಮ್ಮೂದ್ ಮುಸ್ಲಿಯಾರ್ ಅನುಸ್ಮರಣೆ

ಸಮಸ್ತ ಕೇರಳ ಜಂಇಯತುಲ್ ಉಲಮಾ ಸದಸ್ಯರು, ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿ , ಸುನ್ನೀ ಜಂಇಯತುಲ್ ಉಲಮಾ ಕರ್ನಾಟಕ ಪ್ರಧಾನ ಕಾರ್ಯದರ್ಶಿ , ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರು, ಪ್ರಮುಖ ವಿದ್ವಾಂಸರು , ಹಲವಾರು ಪಂಡಿತರನ್ನು ಸಮುದಾಯಕ್ಕೆ ಅರ್ಪಿಸಿದ ಶೈಖುನಾ ಅಲ್ ಹಾಜ್ ಎಡಪ್ಪಾಲಂ ಮಹಮ್ಮೂದ್ ಮುಸ್ಲಿಯಾರ್ ಇವರ ಅನುಸ್ಮರಣಾ ಕಾರ್ಯಕ್ರಮವು ಝೂಮ್ ಮುಖಾಂತರ ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ , ಸಯ್ಯಿದ್ ಇಲ್ಯಾಸ್ ತಂಙಳ್ ಎರ್ಮಾಡ್ ಇವರ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮವನ್ನು ಸಂಘಟನಾ ಅಧ್ಯಕ್ಷ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ಕೊಡಗು ಇವರು ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಸಾಂತ್ವನ ವಿಭಾಗದ ಅಧ್ಯಕ್ಷ ಇಬ್ರಾಹಿಂ ಹಾಜಿ ಅತ್ರಾಡಿ, ಇಹ್ಸಾನ್ ವಿಭಾಗದ ಅಧ್ಯಕ್ಷ ಹಂಝ ಹಾಜಿ ಕನ್ನಂಗಾರ್, ರಾಷ್ಟ್ರೀಯ ಸಮಿತಿಯ ಸದಸ್ಯರು ಝೋನ್ ಮತ್ತು ಸೆಕ್ಟರ್ ನಾಯಕರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಆರಂಭದಲ್ಲಿ ಶಿಕ್ಷಣ ವಿಭಾಗದ ಅಧ್ಯಕ್ಷ ಉಬೈದುಲ್ಲಾ ಸಖಾಫಿ ಸ್ವಾಗತಿಸಿ , ಖಲಂದರ್ ಬಾವ ಪರಪ್ಪು ವಂದಿಸಿದರು.

error: Content is protected !! Not allowed copy content from janadhvani.com