ಹೊಸದಿಲ್ಲಿ: ಆ್ಯಂಡ್ರಾಯ್ಡ ಫೋನ್ ಗ್ರಾಹಕರೇ ಎಚ್ಚರಿಕೆಯಿಂದ ಇರಿ. ಆದಾಯ ತೆರಿಗೆ ರೀ ಫಂಡ್ ಮಾಡಿಕೊಡಲಾಗುತ್ತದೆ ಎಂಬ ಆಕರ್ಷಕ ಸಂದೇಶದ ಲಿಂಕ್ ಇರುವ ಟ್ರೋಜನ್ ಮಾಲ್ವೇರ್ ದೇಶದ ಬ್ಯಾಂಕ್ಗಳ ಗ್ರಾಹಕರಿಗೆ ಬರುತ್ತಿದೆ.
ಈಗಾಗಲೇ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ 27ಬ್ಯಾಂಕ್ಗಳ ಗ್ರಾಹಕರಿಗೆ ಇಂಥ ಸಂದೇಶ ರವಾನೆಯಾಗಿದೆ ಎಂದು ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಮಂಗಳವಾರ ಈ ಎಚ್ಚರಿಕೆ ನೀಡಿದೆ.
ಆದಾಯ ತೆರಿಗೆ ರೀ ಫಂಡ್ ಮಾಡಲಾಗುತ್ತದೆ ಎಂಬ ಆಮಿಷವಿರುವ ಸಂದೇಶ ಲಿಂಕ್ ಮೊಬೈಲ್ಗೆ ಬರುತ್ತದೆ. ಅದನ್ನು ಓಪನ್ ಮಾಡಿದಾಗ ಗ್ರಾಹಕರ ಖಾಸಗಿ ಮಾಹಿತಿಗೆ ಧಕ್ಕೆಯಾಗಲಿದೆ ಎಂದು ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ.
ಈ ಮಾಲ್ವೇರ್ಗೆ “ಡ್ರಿನಿಕ್’ ಎಂದು ಹೆಸರಿಸಲಾಗಿದ್ದು, 2016ರಿಂದಲೇ ಅದು ಕಾರ್ಯಾಚರಿಸುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಆ್ಯಂಡ್ರಾಯ್ಡ ತಂತ್ರಜ್ಞಾನ ಇರುವ ಮೊಬೈಲ್ಗಳ ಗ್ರಾಹಕರನ್ನು ಗುರಿಯಾಗಿರಿಸಿಕೊಂಡು ಸಂದೇಶ ರವಾನೆಯಾಗುತ್ತಿದೆ ಎಂದು ಸರಕಾರದ ತಂಡ ತಿಳಿಸಿದೆ.
ರೀ ಫಂಡ್ ಹೆಸರಿನಲ್ಲಿ ಬರುವ ಲಿಂಕ್ ಆ್ಯಪ್ ಡೌನ್ಲೋಡ್ ಮಾಡಲು ಸೂಚಿಸುತ್ತದೆ. ಎಸ್ಎಂಎಸ್, ಕಾಲ್ ಲಾಗ್, ಕಾಂಟಾಕ್ಟ್ಸ್ ಸೇರಿದಂತೆ ಹಲವು ವಿಭಾಗಗಳ ಪ್ರವೇಶಕ್ಕೆ ಅನುಮತಿ ಕೇಳುತ್ತದೆ. ಅದಕ್ಕೆ ಅವಕಾಶ ನೀಡಕೂಡದು ಎಂದು ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ.
ಅಂಥ ಸಮಸ್ಯೆಗಳು ಕಂಡುಬಂದಲ್ಲಿ incident@cert-in.org.in ಗೆ ಇ-ಮೇಲ್ ಮೂಲಕ ದೂರು ಸಲ್ಲಿಸಲು ಅವಕಾಶ ಇದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ